ನ್ಯೂಸ್ ನಾಟೌಟ್: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಸುಳ್ಯದ ಜೆಡಿಎಸ್ ಪಕ್ಷದ ಮುಖಂಡರು ಭೇಟಿಯಾಗಿ ಮಾತುಕತೆ ನಡೆಸಿದರು.
ಎರಡು ದಿನಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ದೇವೇಗೌಡರ ಕುಟುಂಬ ಆಗಮಿಸಿತ್ತು. ಈ ವೇಳೆ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ, ತಾಲೂಕು ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿ, ಮುಖ್ಯ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ನಿಹಾಲ್ ಎಸ್ ಕೊಡ್ತುಗುಳಿ, ಕಾರ್ತಿಕ್ ಕಡಬ, ಪ್ರಣಮ್ ಸಿಬಿ ಮತ್ತಿತರರು ಉಪಸ್ಥಿತರಿದ್ದರು.