ನ್ಯೂಸ್ ನಾಟೌಟ್ : ಸುಳ್ಯದ ನೆಹರೂ ಮೆಮೊರಿಯಲ್ ಕಾಲೇಜಿನಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಫೆಬ್ರವರಿ ೪ರಂದು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಬೈಕ್ ರ್ಯಾಲಿ ಮೂಲಕ ವಿಭಿನ್ನವಾಗಿ ಆಚರಿಸಲಾಯಿತು. ಕಾಲೇಜಿನ NSS , ರೆಡ್ ಕ್ರಾಸ್ ಮತ್ತು ಚುನಾವಣಾ ಸಾಕ್ಷರತಾ ಸಂಘದವರು ಈ ರ್ಯಾಲಿಯಲ್ಲಿ ಪಾಲ್ಗೊಂಡರು. ಕಾಲೇಜಿನ ಪ್ರಾಂಶುಪಾಲಡಾ. ರುದ್ರಕುಮಾರ್ ಎಂ.ಎಂ ಸಂವಿಧಾನದ ಬಗ್ಗೆ ಜಾಗೃತಿ ಜಾಥಾ ಬಗ್ಗೆ ಮಾತನಾಡಿದರು, ಬಳಿಕ ಜಾಥಾಕ್ಕೆ ಚಾಲನೆ ನೀಡಿದರು. KVG ವೃತ್ತದಿಂದ ಜಾಥಾ ಆರಂಭಗೊಂಡಿತು. ಕಾಲೇಜಿನ ಐ.ಕ್ಯೂ.ಎ.ಸಿ ಸಂಯೋಜಕಿ ಡಾ. ಮಮತಾ ಕೆ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ, NSS ಘಟಕಾಧಿಕಾರಿ ಸಂಜೀವ ಕುದ್ಪಾಜೆ, ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥ ಕುಲದೀಪ್ ಪಿ.ಪಿ ಮತ್ತು ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ವಿವಿಧ ಘಟಕಗಳ ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.