21.6 C
Sullia
Sunday, March 8, 2026

ತಮಿಳುನಾಡಿನ ಕರೂರಿನಲ್ಲಿ ಕಾಲ್ತುಳಿತ ಕೇಸ್; ಮೃತರ ಕುಟುಂಬಗಳಿಗೆ ನಟ ವಿಜಯ್ ವಿಡಿಯೋ ಕರೆ!ಹೇಳಿದ್ದೇನು?

ನ್ಯೂಸ್ ನಾಟೌಟ್ :ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿಯಲ್ಲಿ ನಡೆದ ದುರಂತ ಭೀಕರ ದುರಂತಗಳಲ್ಲಿ ಒಂದು. ಇದೀಗ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ಅವರು ವೀಡಿಯೊ ಕರೆಗಳ ಮೂಲಕ ವೈಯಕ್ತಿಕವಾಗಿ ಮಾತನಾಡಿ ಸಹಾಯ ಮಾಡಲು ಪ್ರಾರಂಭಿಸಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ವಿಡಿಯೋ ಕರೆ ಮಾಡಿದ ವೇಳೆ ನಾನು ನಿಮ್ಮೊಂದಿಗಿದ್ದೇನೆ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ ಎಂದು ವಿಜಯ್ ದುಃಖಿತ ಕುಟುಂಬಗಳಿಗೆ ಭರವಸೆ ನೀಡಿದ್ದಾರೆ. ವೀಡಿಯೊ ಕರೆಯ ಸಮಯದಲ್ಲಿ ರೆಕಾರ್ಡ್ ಮಾಡಬೇಡಿ ಅಥವಾ ಫೋಟೋ ತೆಗೆದುಕೊಳ್ಳಬೇಡಿ ಎಂದು ನಟರ ತಂಡ ಕುಟುಂಬಗಳನ್ನು ವಿನಂತಿಸಿದೆ ಎಂದು ಮೂಲಗಳು ಹೇಳಿವೆ.

ಪ್ರತಿಯೊಂದು ಕರೆಯೂ ಸುಮಾರು 20 ನಿಮಿಷಗಳ ಕಾಲ ನಡೆದಿತ್ತು ಎನ್ಎಂನಲಾಗಿದ್ದು, ಈ ಸಮಯದಲ್ಲಿ ವಿಜಯ್ ತೀವ್ರ ಸಂತಾಪ ವ್ಯಕ್ತಪಡಿಸಿ ಸಹಾಯದ ಭರವಸೆ ನೀಡಿದರು. ಮೂಲಗಳು ಹೇಳುವಂತೆ ವಿಜಯ್ ಅವರು ಶೀಘ್ರದಲ್ಲೇ ಕುಟುಂಬಗಳನ್ನು ಖುದ್ದಾಗಿ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹಲವಾರು ಟಿವಿಕೆ ಕಾರ್ಯಕರ್ತರನ್ನು ಬಂಧಿಸಲಾಗಿದ್ದರೂ, ಯಾವುದೇ ಎಫ್‌ಐಆರ್‌ನಲ್ಲಿ ವಿಜಯ್ ಅವರ ಹೆಸರಿಲ್ಲ. ಈ ನಡುವೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದ ಹಿನ್ನೆಲೆ ಬಿಜೆಪಿ ನಾಯಕಿ ಉಮಾ ಆನಂದನ್ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles