ನ್ಯೂಸ್ ನಾಟೌಟ್ : ಬಿಗ್ ಬಾಸ್ ಮನೆಗೆ ಸ್ಪರ್ಧಿಗಳು ರೀ ಎಂಟ್ರಿ ಕೊಟ್ಟಿದ್ದಾರೆ.ಇದೇ ಖುಷಿಯಲ್ಲಿ ಕಿಚ್ಚ ಸುದೀಪ್ ಧನ್ಯವಾದ ಹೇಳಿದ್ದಾರೆ.
ಟ್ವೀಟ್ ಮೂಲಕ ಪ್ರತಿಕ್ರಿಯಿಸುತ್ತಾ, ಬೀಗಮುದ್ರೆ ತೆಗೆಯುವಂತೆ ನಿರ್ದೇಶನ ನೀಡಿದ ಡಿಸಿಎಂ ಡಿಕೆಶಿ ಹಾಗೂ ಸಹಾಯ ನೀಡಿದ ಮೊಹಮ್ಮದ್ ನಲಪಾಡ್ ಅವರಿಗೆ ಸುದೀಪ್ ಧನ್ಯವಾದ ಸಲ್ಲಿಸಿದ್ದಾರೆ. ‘ಸಕಾಲಕ್ಕೆ ನನ್ನ ಕರೆಗೆ ಸ್ಪಂದಿಸಿದ ಗೌರವಾನ್ವಿತ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಅವರಿಗೆ ಹಾಗೂ ಈ ಗೊಂದಲದಲ್ಲಿ ಬಿಗ್ ಬಾಸ್ ಯಾವುದೇ
ರೀತಿಯಲ್ಲೂ ಭಾಗಿಯಾಗಿಲ್ಲ ಎಂಬುದನ್ನು ಒಪ್ಪಿಕೊಂಡಿರುವ
ಸಂಬಂಧಪಟ್ಟ ಅಧಿಕಾರಿಗಳಿಗೆ ಧನ್ಯವಾದಗಳನ್ನು ಅರ್ಪಿಸುವೆ. ಈ
ನಿಟ್ಟಿನಲ್ಲಿ ಪ್ರಯತ್ನಿಸಿದ ನಲಪಾಡ್ ಅವರಿಗೂ ಧನ್ಯವಾದ’ ಎಂದು
ತಮ್ಮ ‘ಎಕ್ಸ್’ ಖಾತೆಯಲ್ಲಿ ರಾತ್ರಿ 11.42ಕ್ಕೆ ಪೋಸ್ಟ್ ಹಾಕಿದ್ದರು.
‘ಬಿಗ್ ಬಾಸ್ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ
ಜಾಲಿವುಡ್ ಆವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ
ಜಿಲ್ಲೆಯ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಡಿಸಿಎಂ
ತಿಳಿಸಿದ್ದರು.













