ನ್ಯೂಸ್ ನಾಟೌಟ್: ಸೌಜನ್ಯ ಗೌಡ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ ಎಂದು ನಡೆಯುತ್ತಿರುವ ಹೋರಾಟಗಳ ಬೆನ್ನಲ್ಲೇ ಪ್ರಕರಣದ ಮರು ತನಿಖೆಗೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು, ಆದರೆ ಅವರು ಸಲ್ಲಿಸಿದ್ದ ಅರ್ಜಿ ಈಗ ವಜಾ ಆಗಿದೆ.
ಸೌಜನ್ಯ ಪ್ರಕರಣವನ್ನು ಮರುತನಿಖೆ ಮಾಡಲು ಆಗುವುದಿಲ್ಲ ಎನ್ನುವ ಮೂಲಕ ಸೌಜನ್ಯಾ ಪೋಷಕರು ಸಲ್ಲಿಸಿದ ಅರ್ಜಿಯನ್ನು ವಜಾ ಮಾಡಿದೆ. ಈ ಮೂಲಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸೌಜನ್ಯಳ ಕುಟುಂಬಸ್ಥರಿಗೆ ಭಾರಿ ಹಿನ್ನಡೆಯಾಗಿದೆ. ಈ ಮೂಲಕ ಕೋರ್ಟ್ ಈ ಹಿಂದಿನ ಆದೇಶವನ್ನು ಎತ್ತಿಹಿಡಿದಿದ್ದು, ಸಂತೋಷ ನಿರಪರಾಧಿ ಎಂದಿದೆ.
Click