ನ್ಯೂಸ್ ನಾಟೌಟ್: ಮದ್ಯಪಾನ ಪ್ರಿಯರಿಗೆ ಕಹಿ ಸುದ್ದಿ ಪ್ರಕಟವಾಗಿದೆ. ಈ ವಾರ ಮದ್ಯ ಮಾರಾಟದಲ್ಲಿ ಭಾರಿ ವ್ಯತ್ಯಯವಾಗಲಿದೆ. ರಾಜ್ಯದಲ್ಲಿ ಮೇ 6 ರಿಂದ 19ರವರೆಗೂ ಮದ್ಯ ಮಾರಾಟಗಾರರು ಮುಷ್ಕರ ನಡೆಸಲು ತೀರ್ಮಾನಿಸಿದ್ದು ಮುಂದಿನ 15 ದಿನಗಳವರೆಗೂ ರಾಜ್ಯದಲ್ಲಿ ಮದ್ಯಪಾನ ಮಾಡುವವರಿಗೆ ಸಂಕಷ್ಟ ಎದುರಾಗಲಿದೆ.
ಮಂಗಳೂರು ವಿಭಾಗದ ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳಲ್ಲಿ ಮೇ 12ರಂದು ಮದ್ಯಪಾನ ಸಿಗುವುದಿಲ್ಲ. ಹೀಗಾಗಿ ನೀವೆನಾದರೂ ಆ ಡೇಟ್ ನಲ್ಲಿ ಪಾರ್ಟಿ ಹಮ್ಮಿಕೊಂಡಿದ್ದರೆ ಅದನ್ನು ಬದಲಾಯಿಸಿಕೊಳ್ಳಬೇಕಿದೆ ಅಥವಾ ಮುಂಚಿತವಾಗಿ ಮದ್ಯ ಖರೀದಿ ಮಾಡಿ ಇಟ್ಟುಕೊಳ್ಳಬೇಕಾಗುತ್ತದೆ. ಅದೇ ದಿನ ಮೈಸೂರು ವಿಭಾಗದಲ್ಲಿ ಮುಷ್ಕರ ನಡೆಸಲಾಗುತ್ತಿದ್ದು, ಈ ವೇಳೆಯಲ್ಲಿ ಮೈಸೂರು, ಚಿಕ್ಕಮಗಳೂರು, ಹಾಸನ, ಮಂಡ್ಯ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಮದ್ಯಪಾನ ಸಿಗುವುದಿಲ್ಲ. ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಈ ಕುರಿತು ಘೋಷಿಸಿದ್ದಾರೆ. ಮುಷ್ಕರ ನಡೆಯುವ ದಿನ ಅಂದು ಕೆಎಸ್ ಬಿಸಿಎಲ್ ಡಿಪೋಗಳಲ್ಲಿ ಮದ್ಯ ಖರೀದಿ ಮಾಡುವುದಿಲ್ಲ. ಹಾಗಾಗಿ ಆಯಾ ಜಿಲ್ಲೆಗಳಲ್ಲಿ ಮುಷ್ಕರ ನಡೆಯುವ ದಿನ ಮದ್ಯ ಸಿಗುವುದಿಲ್ಲ ಎಂದು ತಿಳಿಸಲಾಗಿದೆ.