ನ್ಯೂಸ್ ನಾಟೌಟ್ : ಕಳೆದ ಕೆಲವು ವರ್ಷಗಳಿಂದ ಅವಿನಾಶ್ ಬಸ್ ನಲ್ಲಿ ಕಂಡೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಯುವಕನೊಬ್ಬ ಹಠಾತ್ ಆಗಿ ಸಾವಿಗೀಡಾಗಿದ್ದಾರೆ.
ಮೃತನ ಹೆಸರು ಗುರು ಪ್ರಸಾದ್ ಕುಂಚಡ್ಕ ಅವರಿಗೆ 30 ವರ್ಷವಾಗಿತ್ತು, ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾವೊಂದರಲ್ಲಿ ಕಳಿಸಿಕೊಡಲಾಗುತ್ತೆ, ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಸಮಸ್ಯೆಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕಾರಿ ಬೆಳವಣಿಗೆಯಾಗಿದೆ.