ನ್ಯೂಸ್ ನಾಟೌಟ್: ತೂಗು ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ರೋಪ್ ಕಟ್ ಆಗಿ ಮೂವರು ಕೆಳಕ್ಕೆ ಬಿದ್ದಿರುವ ದುರ್ಘಟನೆ ಅಕ್ಟೋಬರ್ 17ರಂದು ನಡೆದಿದೆ.
ದುರ್ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗುರುವಾರ ಅರಮನೆ ಗಯಾ ಎಂಬಲ್ಲಿನ ತೂಗು ಸೇತುವೆ ಮೂಲಕ ತೇಜ ಕುಮಾರ್, ಕುಸುಮಾಧರ, ಚಂದ್ರಶೇಖರ ಎಂಬುವವರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ತೂಗು ಸೇತುವೆಯ ರೋಪ್ ತುಂಡಾಗಿ ಮೂವರು ಕೂಡ ಕೆಳಕ್ಕೆ ಬಿದ್ದಿದ್ದಾರೆ. ಈ ಪೈಕಿ ಕುಸುಮಾಧರ ಎಂಬುವವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆ ನೀಡಲಾಗಿದೆ. ಪ್ರತಿ ನಿತ್ಯ ಈ ಸೇತುವೆಯ ಮೇಲೆ ಶಾಲಾ ಮಕ್ಕಳು, ಸ್ಥಳೀಯ ಜನರು ಓಡಾಡುತ್ತಿರುತ್ತಾರೆ. ಅವರೆಲ್ಲರ ಪ್ರಾಣ ರಕ್ಷಣೆಯನ್ನು ಮಾಡಬೇಕಾಗಿರುವ ಅಧಿಕಾರಿಗಳು, ರಾಜಕಾರಣಿಗಳು ಮೌನವಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಶಾಸಕರು, ಅಧಿಕಾರಿಗಳು ಕ್ರಮ ತೆಗೆದುಕೊಳ್ಳದಿದ್ದರೆ ಸುಳ್ಯ ತಾಲೂಕು ಕಚೇರಿಯ ಮುಂಭಾಗದಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆಯವರು ಎಚ್ಚರಿಸಿದ್ದಾರೆ.