ನ್ಯೂಸ್ ನಾಟೌಟ್ :ದಕ್ಷಿಣ ಆಫ್ರಿಕಾದ ಶಿಕ್ಷಕನೊಬ್ಬ ಹಿಂದೂ ವಿದ್ಯಾರ್ಥಿಯು ಕೈಗೆ ಕಟ್ಟಿಕೊಂಡಿದ್ದ ಧಾರ್ಮಿಕ ವಿಚಾರಕ್ಕೆ ಸಂಬಂಧಿಸಿದ ದಾರವನ್ನು ಕತ್ತರಿಸಿ ಆತನಿಗೆ ಅವಮಾನ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಕೆರಳಿದ ದಕ್ಷಿಣ ಆಫ್ರಿಕಾದ ಹಿಂದೂ ಸಮುದಾಯ ಇದನ್ನು ತೀವ್ರವಾಗಿ ಖಂಡಿಸಿದೆ.
ಇದೊಂದು ಸೂಕ್ಷ್ಮತೆಯಿಲ್ಲದ ಹಾಗೂ ಬೇಜವಾಬ್ದಾರಿ ಕಾರ್ಯ ಎಂದು ಆಕ್ರೋಶ ವ್ಯಕ್ತವಾಗಿದೆ.ಈ ಘಟನೆ ಕಳೆದ ವಾರ ಡ್ರ್ಯಾಕನ್ಸ್ ಬರ್ಗ್ ಸೆಂಕಡರಿ ಸ್ಕೂಲ್ ನಲ್ಲಿ ನಡೆದಿದೆ ಎನ್ನಲಾಗಿದೆ. ಇದು ಕ್ವಾಜುಲು ನಟಲಾ ಪ್ರಾಂತ್ಯದಲ್ಲಿದೆ.
ಈ ಕ್ರಮವನ್ನ ದಕ್ಷಿಣ ಆಫ್ರಿಕಾದ ಹಿಂದೂ ಮಹಾಸಭಾ ತೀವ್ರವಾಗಿ ಖಂಡಿಸಿದ್ದು ಶಿಕ್ಷಣ ಪ್ರಾಧಿಕಾರಕ್ಕೆ ಕೂಡಲೇ ಕ್ರಮವನ್ನು ಕೈಗೊಳ್ಳುವಂತೆ ಆಗ್ರಹಿಸಿದೆ. ಮಣಿಕಟ್ಟಿಗೆ ಕಟ್ಟಿಕೊಂಡಿದ್ದ ಪವಿತ್ರದಾರವನ್ನು ಶಿಕ್ಷಕ ಶಾಲೆಯಲ್ಲಿ ಧರ್ಮವನ್ನು ಪ್ರತಿನಿಧಿಸುವ ಸಂಸ್ಕೃತಿಯನ್ನು ಪ್ರತಿನಿಧಿಸುವ ಸಂಕೇತಗಳನ್ನ ಯಾವುದೇ ರೀತಿ ಧರಿಸುವಂತಿಲ್ಲ ಎಂದು ದಾರವನ್ನು ಕತ್ತರಿಸಿ ಹಾಕಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಇನ್ನು ದಕ್ಷಿಣ ಆಫ್ರಿಕಾದ ಹಿಂದೂ ಮಹಾಸಭಾದ ಅಧ್ಯಕ್ಷ ಅಶ್ವಿನ್ ತ್ರಿಕಮ್ ಈ ಬಗ್ಗೆ ಶಾಲೆಯ ಪ್ರಾಂಶುಪಾಲರು ಹಾಗೂ ಚೇರ್ ಮೆನ್ ರೊಂದಿಗೆ ಮಾತನಾಡಿದ್ದು. ನಾವೆಲ್ಲರೂ ಹಿಂದೂಗಳು, ನಿಮ್ಮ ಶಾಲೆಯಲ್ಲಿ ರಿಂಗು, ಸ್ಟ್ರಿಂಗು ಹಾಕಿಕೊಂಡು ಬರಲು ಉಳಿದ ವಿದ್ಯಾರ್ಥಿಗಳಿಗೆ ಅವಕಾಶವಿದೆ. ನಮ್ಮ ಹಿಂದೂ ವಿದ್ಯಾರ್ಥಿಗೆ ಪವಿತ್ರ ದಾರ ಕಟ್ಟಿಕೊಂಡು ಬರಲು ಯಾಕೆ ಅವಕಾಶವಿಲ್ಲ. ಅವನ ವಿರುದ್ಧ ಈ ರೀತಿ ನಡೆದುಕೊಂಡಿರುವುದು ನಿಜಕ್ಕೂ ಅನ್ಯಾಯ ಎಂದು ಹೇಳಿದ್ದಾರೆ ಎನ್ನಲಾಗಿದೆ.
Click
ಮಂಗಳೂರು: ರಾತ್ರಿ ಕರ್ತವ್ಯದಲ್ಲಿದ್ದ ಪೊಲೀಸರ ವಾಕಿಟಾಕಿ ಕಳವು..! ಪ್ರಕರಣ ದಾಖಲು
ಫೆ.12ರಿಂದ ಪ್ರಧಾನಿ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸ, ನೂತನ ಅಧ್ಯಕ್ಷ ಟ್ರಂಪ್ ಜೊತೆ ಮಾತುಕತೆ