ನ್ಯೂಸ್ ನಾಟೌಟ್ : ಬೆಳ್ಳಾರೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೊಲೀಸರು ಇದೀಗ ಲಾಠಿ ಚಾರ್ಜ್ ನಡೆಸುತ್ತಿದ್ದಾರೆ. ಕಲ್ಲು ತೂರಾಟ ನಡೆಸುತ್ತಿದ್ದಂತೆ ಪೊಲೀಸರು ಲಾಠಿ ಕೈಗೆತ್ತಿಕೊಂಡಿದ್ದಾರೆ. ಪಕ್ಷದ ಕೆಲವು ಕಾರ್ಯಕರ್ತರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಷದ ಕಾರ್ಯಕರ್ತರ ವಿರುದ್ಧ ಲಾಠಿ ಚಾರ್ಜ್ ನಡೆಸಿರುವುದಕ್ಕೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇನ್ನೊಂದು ಕಡೆ ಪ್ರವೀಣ್ ನೆಟ್ಟಾರ್ ಮೃತದೇಹ ಮನೆಗೆ ತಲುಪಿದೆ. ಅಲ್ಲಿ ನೂರಾರು ಮಂದಿ ಪಾರ್ಥೀವ ಶರೀರ ವೀಕ್ಷಣೆಗೆ ಸೇರಿದ್ದಾರೆ.
- +91 73497 60202
- [email protected]
- October 7, 2024 7:55 AM