ನ್ಯೂಸ್ ನಾಟೌಟ್ : ಆರ್ಎಸ್ಎಸ್ ನಿರ್ಬಂಧದ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ ಸ್ಪಷ್ಟನೆ ನೀಡಿದ್ದಾರೆ.ಆರ್ಎಸ್ಎಸ್ ವಿಚಾರದಲ್ಲಿ ನಾವು ಹೊಸ ನಿಯಮ ರೂಪಿಸಿಲ್ಲ. ಬಿಜೆಪಿ ಸರ್ಕಾರ ಮಾಡಿದ್ದ ಆದೇಶವನ್ನೇ ಹೊರಡಿಸಿದ್ದೇವೆ’ ಎಂದು ಹೇಳಿದ್ದಾರೆ.
ಕೋರಮಂಗಲದ ವೀರ ಯೋಧ ಉದ್ಯಾನದಲ್ಲಿ ಭಾನುವಾರ
ನಡೆಸಿದ ನಾಗರಿಕರೊಂದಿಗೆ ಸಂವಾದದಲ್ಲಿ ಜನರು ಕೇಳಿದ ಪ್ರಶ್ನೆಗಳಿಗೆ
ಅವರು ಉತ್ತರಿಸಿ, ‘2013ರಲ್ಲಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗ ಹೊರಡಿಸಿದ್ದ ಆದೇಶವನ್ನು ನಾವು ಮತ್ತೆ ಜಾರಿಗೊಳಿಸುತ್ತಿದ್ದೇವೆ’ ಎಂದು ಹೇಳಿದರು.













