ಕರಾವಳಿ

ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿ ಬೇಕರಿ ಕೆಲಸಗಾರ ಆತ್ಮಹತ್ಯೆ

323

ನ್ಯೂಸ್ ನಾಟೌಟ್ : ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾತ ಖಾದ್ಯ ತಿಂಡಿ ತಯಾರಿಸುವ ಎಣ್ಣೆ ಬಾಣಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಿಂದ ವರದಿಯಾಗಿದೆ. ಮೃತರು ಬಿಜೈ ಪೊಲೀಸ್ ಠಾಣಾ ವ್ಯಾಪ್ತಿಯ ಅತ್ತೂರಿನಲ್ಲಿರುವ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.ಪೊಳಲಿ ನಿವಾಸಿ ಪುರಂದರ(50) ಮೃತ ದುರ್ದೈವಿ.

ಮೃತ ಪುರಂದರ ಅವರು ಬೇಕರಿಯಲ್ಲಿ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಕಳೆದ ಎರಡು ದಿನಗಳಿಂದ ಮಾನಸಿಕವಾಗಿ ಬಳಲಿದವರಂತೆ ಕಂಡು ಬಂದಿದ್ದರು ಎನ್ನಲಾಗಿದೆ. ನಿನ್ನೆ ಮಧ್ಯಾಹ್ನ ವೇಳೆಗೆ ಯಾರೂ ಇಲ್ಲದ ಸಮಯದಲ್ಲಿ ಬಾಗಿಲು ಹಾಕಿ ಉರಿಯುತ್ತಿದ್ದ ಎಣ್ಣೆ ಬಾಣಲೆಗೆ ಹಾರಿದ್ದಾರೆ ಎಂದು ತಿಳಿದು ಬಂದಿದೆ. ಮೈಯೆಲ್ಲ ಸುಟ್ಟ ಗಾಯಗಳೊಂದಿಗೆ ಬೊಬ್ಬಿಡುತ್ತಿದ್ದ ಪುರಂದರ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಬಜ್ಪೆ ಪೊಲೀಸರು ಪುಕರಣ ದಾಖಲಿಸಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

See also  ಸಂಪಾಜೆ-ಮಡಿಕೇರಿ ನಡುವಿನ ರಾಷ್ಟ್ರೀಯ ಹೆದ್ದಾರಿ ಕುಸಿಯುವ ಭೀತಿ..!, ಇಂದು ರಾತ್ರಿಯಿಂದ (ಜು18) ನಾಲ್ಕು ದಿನ ವಾಹನ ಸಂಚಾರ ನಿರ್ಬಂಧ
  Ad Widget   Ad Widget   Ad Widget   Ad Widget   Ad Widget   Ad Widget   Ad Widget