ಬೆಂಗಳೂರು

ಶಾಲಾ ಬಾಲಕಿಗೆ ಯಮಸ್ವರೂಪಿಯಾದ ಬಿಎಂಟಿಸಿ ಬಸ್, ಅಪಘಾತದಲ್ಲಿ ರಸ್ತೆಗೆ ಬಿದ್ದಿದ್ದ ಮಗು ಮೇಲೆಯೇ ಹರಿದ ಬಸ್-ಪ್ರೀತಿಯ ಮಗಳನ್ನು ಕಳೆದುಕೊಂಡು ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

ನ್ಯೂಸ್ ನಾಟೌಟ್ : ಬಿಎಂಟಿಸಿ ಬಸ್ ಹರಿದು ಶಾಲೆಗೆ ತೆರಳುತ್ತಿದ್ದ ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ.ನಾಲ್ಕುವರೆ ವರ್ಷದ ಪೂರ್ವಿ ಮೃತ ಶಾಲಾ ಬಾಲಕಿ ಎಂದು ತಿಳಿದು ಬಂದಿದೆ.

ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ನಲ್ಲಿ ಪ್ರಿಕೆ.ಜಿ. ಓದುತ್ತಿದ್ದ ಬಾಲಕಿ. ಪೂರ್ವಿ ರಾವ್ ತಂದೆ ಪ್ರಸನ್ನ ಸಿಸ್ಕೋ ಕಂಪನಿಯ ಉದ್ಯೋಗಿ. ಪ್ರತಿನಿತ್ಯ ತಂದೆಯೇ ಮಗಳನ್ನ ಶಾಲೆಗೆ ಬಿಟ್ಟು ಕೆಲಸಕ್ಕೆ ಹೋಗ್ತಿದ್ರು.ಎಂದಿನಂತೆ ಇಂದು ಸ್ಕೂಲ್​ಗೆ ಬಿಡಲು ಹೋಗುತ್ತಿದ್ದ ವೇಳೆ ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ಭೀಕರ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

ತಂದೆ ಪ್ರಸನ್ನ ಎಂಬುವರು ಮಗಳನ್ನ ಶಾಲೆಗೆ ಬಿಡಲು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್ ಬೈಕ್​​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ತಂದೆ ಪ್ರಸನ್ನ ಎಡಬದಿ ಬಿದ್ರೆ ಮಗಳು ಪೂರ್ವಿ ಬೈಕ್​​ನ ಬಲಬದಿ ಬಿದ್ದಿದ್ದಾಳೆ ಎನ್ನಲಾಗಿದೆ.

ಈ ವೇಳೆ ಪೂರ್ವಿ ಮೇಲೆಯೇ ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ. ಪೂರ್ವಿ ತಂದೆ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಚಾಲಕನನ್ನ ವಶಕ್ಕೆ ಪಡೆದು ಕೆ.ಎಸ್. ಲೇಔಟ್ ಸಂಚಾರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related posts

‘ನಮ್ಮ ಮೆಟ್ರೋ’ ನಿಲ್ದಾಣದಲ್ಲಿ 20 ನಿಮಿಷಕ್ಕಿಂದ ಹೆಚ್ಚು ಕಾಲ ತಂಗಿದವರಿಗೆ ದಂಡ..! ಏನಿದು ನಿಯಮ..?

ಕೋರ್ಟ್ ಆವರಣದಲ್ಲೇ ವಕೀಲನ ಮೇಲೆ ಮಾರಣಾಂತಿಕ ಹಲ್ಲೆ..! ತಾನೇ ಹೋಗಿ ಪೊಲೀಸರಿಗೆ ಶರಣಾದ ಆರೋಪಿ..!

ನಮಾಜ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣ: ಪರಿಸ್ಥಿತಿ ಉದ್ವಿಗ್ನ..! ಶಾಸಕರನ್ನೇ ಎಳೆದಾಡಿದ ಪೊಲೀಸರು..!