ಕರಾವಳಿಕ್ರೈಂಪುತ್ತೂರು

ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ..!

282

ನ್ಯೂಸ್‌ ನಾಟೌಟ್‌: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ದಂಪತಿ ಅನಾಥವಾಗಿ ಬಿಟ್ಟು ಹೋದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಕರಾಯ ಗ್ರಾಮದಲ್ಲಿ ನಡೆದಿದೆ. ಮಕ್ಕಳ ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದ್ದು, ತಬ್ಬಲಿಯಾದ ಮಕ್ಕಳನ್ನು ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಲಾಗಿದೆ.

ಬೆಳ್ತಂಗಡಿ ತಾಲೂಕು ಕರಾಯ ಪರಿಸರದಲ್ಲಿ ಅಲೆಮಾರಿ ಜನಾಂಗದ ದಂಪತಿ ಬುಟ್ಟಿ ಹೆಣೆಯುವ ಕಾಯಕದೊಂದಿಗೆ ಆಗಾಗ ಕಾಣಿಸಿಕೊಂಡಿದ್ದರು. ಮದ್ಯ ವ್ಯಸನಿಗಳಾದ ಇವರು ಅಲ್ಲಲ್ಲಿ ಮಲಗಿಕೊಂಡು ಅವ್ಯವಸ್ಥಿತ ಜೀವನ ನಡೆಸುತ್ತಿದ್ದರು. ದಂಪತಿಗೆ ದಿನೇಶ ಎಂಬ ನಾಲ್ಕು ವರ್ಷದ ಮಗನಿದ್ದು, ಒಂದು ತಿಂಗಳ ಹಿಂದೆಯಷ್ಟೇ ಹೆಣ್ಣು ಮಗು ಜನಿಸಿತ್ತು. ಈ ಎರಡು ಮಕ್ಕಳನ್ನು ಜೂ. 2ರಂದು ಕರಾಯ ಗ್ರಾಮದ ಫಾತಿಮಾ ಎಂಬವರ ಮನೆಯಲ್ಲಿ ಬಿಟ್ಟು ನಾವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಬರುತ್ತೇವೆ ಎಂದು ಈ ದಂಪತಿ ತಿಳಿಸಿದ್ದರು. ಆದರೆ 2 ದಿನ ಕಳೆದರೂ ಹೆತ್ತವರು ಕಾಣಿಸಿಕೊಳ್ಳದೆ ಹೋದಾಗ ಕಳವಳಗೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳ ಗಮನಕ್ಕೆ ತಂದು ಮಕ್ಕಳನ್ನು ಭಾನುವಾರ ಪುತ್ತೂರಿನ ರಾಮಕೃಷ್ಣಾಶ್ರಮಕ್ಕೆ ಒಪ್ಪಿಸಿದ್ದಾರೆ.

ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ ಮೂರು ದಿನವಾದರೂ ವಾಪಾಸ್‌ ಬಾರದಿದ್ದನ್ನು ಗಮನಿಸಿದ ಫಾತಿಮಾ ಸೋಮವಾರ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿ, ಮಕ್ಕಳನ್ನು ತನ್ನ ಮನೆಯಲ್ಲಿ ಬಿಟ್ಟು ಹೋಗಿರುವ ದಂಪತಿಯನ್ನು ಪತ್ತೆ ಹಚ್ಚುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ.

See also  ಇಂದು ಮಂಗಳೂರಿನಲ್ಲೇ ಉಳಿದು ಕೊಳ್ಳಲಿರುವ ಸಿ.ಎಂ., ನಾಳೆ ಕೊಲ್ಲೂರಿನ ಮೂಕಾಂಬಿಕಾ ದೇಗುಲಕ್ಕೆ ಭೇಟಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget