ಕರಾವಳಿ

ಮೀನುಗಾರಿಕೆಗೆ ತೆರಳಿದ ದೋಣಿ ಮುಳುಗಡೆ..!ಐವರು ಮೀನುಗಾರರ ರಕ್ಷಣೆ

182

ನ್ಯೂಸ್‌ ನಾಟೌಟ್‌: ಮೀನುಗಾರಿಕೆಗೆ ತೆರಳಿದ ದೋಣಿಯೊಂದು ಮಲ್ಪೆಯಲ್ಲಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ ವೇಳೆ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮಂಗಳೂರಿನಿಂದ ಮಲ್ಪೆ ಬಂದರಿಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸಿದ್ದು, ಆಳ ಸಮುದ್ರ ದೋಣಿಯಲ್ಲಿದ್ದ ತಮಿಳುನಾಡು ಮೂಲದ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ದೋಣಿಯ ಪಕ್ಕದಲ್ಲಿದ್ದ ಇನ್ನೊಂದು ದೋಣಿಯವರು ಐವರು ಮೀನುಗಾರರನ್ನು ರಕ್ಷಿಸಿದ್ದಾರೆ.

See also  ಮಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ: ಸಮುದ್ರ ಮಾರ್ಗವಾಗಿ ಶಂಕಿತರು ಪರಾರಿಯಾಗುವ ಸಾಧ್ಯತೆ?
  Ad Widget   Ad Widget   Ad Widget   Ad Widget   Ad Widget   Ad Widget   Ad Widget