Latestಕರಾವಳಿ

ಸುಳ್ಯ: ಮಗುವಿಗೆ ಜನ್ಮ ನೀಡಿ ತೀವ್ರ ರಕ್ತಸ್ರಾವದಿಂದ ಕೊನೆಯುಸಿರೆಳೆದ ಬಾಣಂತಿ, ಏನಿದು ಹೃದಯವಿದ್ರಾವಕ ಘಟನೆ?

1.3k

ನ್ಯೂಸ್ ನಾಟೌಟ್: ಹೆರಿಗೆಯಾದ ಬಳಿಕ ತೀವ್ರ ರಸ್ತಸ್ರಾವದಿಂದ ಮೃತಪಟ್ಟಿರುವ ಘಟನೆ ಬಗ್ಗೆ ಸುಳ್ಯದಿಂದ ವರದಿಯಾಗಿದೆ. ತುಂಬು ಗರ್ಭಿಣಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಹೆಣ್ಣು ಮಗುವಿನ ಜನನವಾಗಿತ್ತು.ಬಳಿಕ ತೀವ್ರ ರಕ್ತ ಸ್ರಾವದಿಂದ ಬಳಲಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮಧುರಾ (29ವ) ಮೃತ ದುರ್ದೈವಿಯೆಂದು ತಿಳಿದು ಬಂದಿದೆ.

ಮಧುರಾ ಅವರು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿಯ ಪುತ್ರಿಯಾಗಿದ್ದು, ಆರು ವರ್ಷಗಳ ಹಿಂದೆ ಬೆಳ್ತಂಗಡಿಯ ನಾರಾವಿ ಗ್ರಾಮದ ನೂಜೋಡಿ ಮನೆ ನಿವಾಸಿ ಶೇಖರ ಮಲೆಕುಡಿಯ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಮೂರುವರೆ ವರ್ಷದ ಗಂಡು ಮಗುವಿದ್ದು, ಎರಡನೆ ಮಗುವಿನ ನಿರೀಕ್ಷೆಯಲ್ಲಿದ್ದರು. ಹೀಗಾಗಿ ಹೆರಿಗೆಗೆಂದು ಜೂ.2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಜೂ.3ರಂದು ಸಂಜೆ 6.45ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಅದೇ ದಿನ ರಾತ್ರಿ 9 ಗಂಟೆಗೆ ತೀವ್ರ ರಕ್ತಸ್ರಾವ ಉಂಟಾಗಿತ್ತು. ತಕ್ಷಣ ಎಚ್ಚೆತ್ತ ವೈದ್ಯರು ಬಾಣಂತಿಯನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ಕರೆತಂದು ದಾಖಲಿಸಲಾಯಿತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ವೈದ್ಯರ ನಿರ್ಲಕ್ಷ್ಯದ ಆರೋಪ
ಬಳಿಕ ಮರಣೋತ್ತರ ಪರೀಕ್ಷೆ ಕೂಡ ನಡೆಸದೆ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಮನೆಯಲ್ಲಿ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಲಾಗಿತ್ತು. ಈ ವಿಷಯ ತಿಳಿದ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಈದು ಮತ್ತಿತರ ನಾಯಕರು ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತಂದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ಮಗುವಿನ ಭವಿಷ್ಯಕ್ಕಾಗಿ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಸುಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

See also  ಶಾಲಾ ವಾಹನಕ್ಕೆ ಬೈಕ್ ಡಿಕ್ಕಿ -ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು
  Ad Widget   Ad Widget     Ad Widget   Ad Widget   Ad Widget   Ad Widget