ಕರಾವಳಿ

ಬಾವಿಯೊಳಗೆ ಬಿದ್ದ ಬೆಕ್ಕನ್ನು ರಕ್ಷಿಸುವಾಗ ತಾನೇ ಬಿದ್ದ ವ್ಯಕ್ತಿ,ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ

280

ನ್ಯೂಸ್ ನಾಟೌಟ್ :ಬಾವಿಯೊಳಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಹೋಗಿ ತಾನೇ ಬಾವಿಯೊಳಗೆ ಬಿದ್ದು ವ್ಯಕ್ತಿಯೊಬ್ಬ ಪರದಾಡಿದ ಘಟನೆ ಕಾರ್ಕಳದ ನಂದಳಿಕೆ ಗ್ರಾಮದ ಕಕ್ಕೆಪದವು ಸಮೀಪ ನಡೆದಿದೆ.ಬೋಜ(೬೦) ಎಂಬವರು ಬಾವಿಗೆ ಬಿದ್ದಿರುವ ವ್ಯಕ್ತಿ.

ಏನಿದು ಘಟನೆ?

ತಮ್ಮ ಮನೆ ಸಮೀಪವಿರುವ ಬಾವಿಗೆ ಬೆಕ್ಕೊಂದು ಬಿದ್ದಿತ್ತು.ಕೂಡಲೇ ಕಾರ್ಯಾಚರಣೆಗಿಳಿದ ಬೋಜ ಎಂಬವರು ಬೆಕ್ಕನ್ನು ರಕ್ಷಿಸಲು ಮುಂದಾಗಿದ್ದಾರೆ.ಬೆಕ್ಕನ್ನು ರಕ್ಷಿಸುವ ವೇಳೆ ತಾನು ಬಾವಿಯೊಳಗೆ ಬಿದ್ದಿದ್ದಾರೆ. ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬಾವಿಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲೆಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿದ್ದಾರೆ.ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆಲ್ಬರ್ಟ್ ಮೋನಿಸ್,ದಾಫೆದರ್ ರೂಪೇಶ್, ಸಿಬ್ಬಂದಿಗಳಾದ ಚಂದ್ರಶೇಖರ್, ಕೇಶವ್, ನಿತ್ಯಾನಂದ,ಸಂಜಯ್ ಪಾಲ್ಗೊಂಡಿದ್ದರು.

See also  ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಸೆರೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget