ಚಿಕ್ಕಮಗಳೂರು

ಕೆರೆಗೆ ಈಜಲೆಂದು ಹೋದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯು,ಮುಗಿಲು ಮುಟ್ಟಿದ ಹೆತ್ತವರ ಆಕ್ರಂದನ

150

ನ್ಯೂಸ್ ನಾಟೌಟ್ :ವಿದ್ಯಾರ್ಥಿಯೋರ್ವ ಕೆರೆಗೆ ಈಜಲೆಂದು ಹೋಗಿ ನೀರಲ್ಲಿ ಮುಳುಗಿ ದುರಂತ ಅಂತ್ಯ ಕಂಡ ಘಟನೆ ವರದಿಯಾಗಿದೆ.ಹರ್ಷ(೨೦) ಕೆರೆಯಲ್ಲಿ ಮುಳುಗಿ ಮೃತಪಟ್ಟ ವಿಧ್ಯಾರ್ಥಿ.

ಚಿಕ್ಕಮಗಳೂರು ನಗರದ ಜಯನಗರ ಬಡಾವಣೆಯ ಹರ್ಷ ಎಂಬ ವಿದ್ಯಾರ್ಥಿ ಸ್ನೇಹಿತರ ಜೊತೆಯಲ್ಲಿ ಈಜಲು ತೆರಳಿದ್ದ ಈ ವೇಳೆ ಈ ದುರ್ಘಟನೆ ಸಂಭವಿಸಿದೆ.ನಗರದ ಖಾಸಗಿ ಕಾಲೇಜಿನ ವಿಧ್ಯಾರ್ಥಿಯಾಗಿರುವ ಈತ ರಜೆ ಹಿನ್ನಲೆಯಲ್ಲಿ ಸ್ನೇಹಿತರೊಂದಿಗೆ ಚಿಕ್ಕಮಗಳೂರು ತಾಲೂಕಿನ ನಲ್ಲೂರು ಕೆರೆಗೆಂದು ಈಜಲು ಹೋಗಿದ್ದ.

ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

See also  ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಉರುಳಿದ ಕಾರು,ಹೋಟೆಲ್ ಉದ್ಯಮಿಯಾಗಿದ್ದ ಚಾಲಕ ದುರಂತ ಅಂತ್ಯ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget