ವೈರಲ್ ನ್ಯೂಸ್

ತನ್ನ ಮೇಲೆ ದಾಳಿ ಮಾಡಿದ್ದ ಚಿರತೆಯನ್ನೇ ಹೆಡೆಮುರಿ ಕಟ್ಟಿ ಬೈಕ್‌ನಲ್ಲಿ ಸಾಗಿಸಿದ ಯುವಕ ! ಅಪಾಯಕಾರಿ ಚಿರತೆಯನ್ನು ಏಕಾಂಗಿಯಾಗಿ ಯುವಕ ಸೆರೆ ಹಿಡಿದದ್ದು ಹೇಗೆ..?

211

ನ್ಯೂಸ್‌ ನಾಟೌಟ್‌: ಇತ್ತೀಚೆಗೆ ಕಾಡುಪ್ರಾಣಿ ಮತ್ತು ಮನುಷ್ಯರ ನಡುವಿನ ಸಂಘರ್ಷ ಹೆಚ್ಚಾಗುತ್ತಿದೆ. ಈ ನಡುವೆ ಯುವಕನೊಬ್ಬ ತನ್ನ ಮೇಲೆ ದಾಳಿ ಮಾಡಿದ ಚಿರತೆಯನ್ನೇ ಸೆರೆ ಹಿಡಿದು ತನ್ನ ಬೈಕ್‌ಗೆ ಕಟ್ಟಿಕೊಂಡು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಗಂಡಸಿ ಹೋಬಳಿ ಬಾಗಿವಾಳು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಚಿರತೆಯನ್ನು ಜೀವಂತವಾಗಿ ಸೆರೆ ಹಿಡಿದ ಯುವಕನನ್ನು ವೇಣುಗೋಪಾಲ್ ಅಲಿಯಾಸ್ ಮುತ್ತು ಎಂದು ಗುರುತಿಸಲಾಗಿದೆ. ಈತ ತಮ್ಮ ಜಮೀನಿಗೆ ಹೋಗುತ್ತಿದ್ದ ಸಂದರ್ಭ ದಿಢೀರ್‌ ಆಗಿ ಚಿರತೆ ದಾಳಿ ಮಾಡಿದೆ. ಈ ಸಂದರ್ಭ ಜೀವ ಉಳಿಸಿಕೊಳ್ಳಲು ಧೈರ್ಯ ಮಾಡಿ ಚಿರತೆ ಜತೆ ಸೆಣಸಾಡಿ ಚಿರತೆಗೆ ಬಡಿಗೆಯಲ್ಲಿ ಹೊಡೆದು ಸೆರೆ ಹಿಡಿದು ಬಳಿಕ ಅದನ್ನು ಬೈಕ್‌ನಲ್ಲಿ ಕಟ್ಟಿಕೊಂಡು ತನ್ನ ಗ್ರಾಮಕ್ಕೆ ತೆರಳಿದ್ದಾನೆ ಎಂದು ತಿಳಿದುಬಂದಿದೆ. ನಂತರ ಚಿರತೆಯನ್ನು ಬೈಕಿನಲ್ಲಿ ಕಟ್ಟಿಕೊಂಡು ಹೋಗಿ ಅರಣ್ಯ ಅಧಿಕಾರಿಗಳಿಗೆ ಒಪ್ಪಿಸಿದ್ದಾನೆ. ಬಳಿಕ ಗ್ರಾಮಸ್ಥರೆಲ್ಲರೂ ಸೇರಿ ಗಾಯಗೊಂಡಿದ್ದ ಮುತ್ತುಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಎಂದು ತಿಳಿದು ಬಂದಿದೆ.

See also  ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ನಾಯಿ ಚಿಕಿತ್ಸೆ ಫಲಿಸದೆ ಸಾವು..! ಇಲ್ಲಿದೆ ಮನಕಲಕುವ ಘಟನೆ..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget