ಕರಾವಳಿಕ್ರೈಂವೈರಲ್ ನ್ಯೂಸ್

ಮಂಗಳೂರಿನ ಖ್ಯಾತ ಆಭರಣ ಮಳಿಗೆಗೆ ಐಟಿ ದಾಳಿ! ರಾಜ್ಯದಲ್ಲಿ 14 ಮಳಿಗೆ ಹೊಂದಿರುವ ಆ ಜ್ಯುವೆಲ್ಲರಿಗೆ ಬೆಳ್ಳಂಬೆಳಗ್ಗೆ ಶಾಕ್!

157

ನ್ಯೂಸ್ ನಾಟೌಟ್ : ನಿನ್ನೆ (ಅ.30) ಕ್ಕೆ ರಾಜ್ಯದ ವಿವಿದೆಡೆ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ ನಡೆದಿತ್ತು. ಇದೀಗ ಮಂಗಳೂರಿನ ಪ್ರತಿಷ್ಠಿತಿ ಆಭರಣ ಮಳಿಗೆಗಳ ಮೇಲೆ ಐಟಿ ದಾಳಿಯಾಗಿದೆ.

ಮಂಗಳೂರಿನ ಕದ್ರಿಯ ಆಭರಣ ಜ್ಯುವೆಲ್ಲರಿಗೆ ಐಟಿ ದಾಳಿ ನಡೆದಿದ್ದು, ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಆಭರಣ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಳಿಗ್ಗಿನಿಂದಲೂ ಐಟಿ ತಪಾಸಣೆ ನಡೆಸಿದೆ.

ಐದಾರು ಜನ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಶೋಧ ನಡೆಸುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನ ಖರೀದಿಯ ಬೇರೆ ಬೇರೆ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸುತ್ತಿದ್ದಾರೆ. ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಆಭರಣ ಜ್ಯುವೆಲ್ಲರಿಯು ರಾಜ್ಯದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಮಳಿಗೆಗಳಿವೆ.

ದ.ಕ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಮಳಿಗೆಗಳಿವೆ. ಉಡುಪಿಯ ಹಲವಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ. ಮಂಗಳೂರು ಅಷ್ಟೇ ಅಲ್ಲದೆ ಪುತ್ತೂರು, ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಸೇರಿದಂತೆ ಅನೇಕ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

See also  ಆ ರಾತ್ರಿ ಬಸ್ ಸ್ಟಾಂಡ್ ನಲ್ಲಿ ಯುವತಿಯ ಸ್ಕರ್ಟ್ ಹರಿದಾಗ ಗೇಲಿ ಮಾಡಿದ ಗೆಳೆಯ..! ಮಾನವೀಯತೆ ಮೆರೆದ ಯುವ ರೈತ, ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget     Ad Widget   Ad Widget   Ad Widget   Ad Widget