ಕ್ರೈಂ

ದ್ವಿಚಕ್ರ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ: ಗಂಭೀರ ಗಾಯಗೊಂಡಿದ್ದ ಸವಾರ ಸಾವು

757

ಪುತ್ತೂರು: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ಸವಾರ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ.

ಅ.12ರ ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದ ವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಹಿತ ಸುರೇಶ್ ರವರು ಬಿದ್ದಿರುವುದನ್ನು ನೋಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುರೇಶ್ ರವರನ್ನು ಕೂಡಲೇ ಆ ದಾರಿಯಾಗಿ ಬಂದ ವಾಹನದ ಮೂಲಕ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

See also  ಗ್ರಾಮ ಪಂಚಾಯತ್ ಸದಸ್ಯೆಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಸೈಕೋ ಪ್ರೇಮಿ..?
  Ad Widget   Ad Widget   Ad Widget   Ad Widget   Ad Widget