ಕರಾವಳಿ

ಉಡುಪಿಯಲ್ಲಿ ನಾಲ್ವರ ಕಗ್ಗೊಲೆ ಪ್ರಕರಣ,ಕುಟುಂಬ ಬಲಿಪಡೆದ ಬಳಿಕ ಫ್ರೆಂಡ್ಸ್ ಜತೆ ದೀಪಾವಳಿ ಆಚರಿಸಿದ್ದ ಆರೋಪಿ..!

ನ್ಯೂಸ್ ನಾಟೌಟ್ :ಉಡುಪಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ ಪ್ರಕರಣದ ಕುರಿತಂತೆ ವಿಚಾರಣೆ ನಡೆಯುತ್ತಿದೆ.ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಕೆಲ ಆತಂಕಕಾರಿ ವಿಚಾರಗಳು ಬೆಳಕಿಗೆ ಬರುತ್ತಿದೆ. ದೀಪಾವಳಿ (Deepavali) ಹಬ್ಬದ ಮುಂಜಾನೆಯೇ ಈ ಕೃತ್ಯ ನಡೆದಿದ್ದು, ಘಟನೆಯ ಬಳಿಕ ಆರೋಪಿ ಪ್ರವೀಣ್ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ದೀಪಾವಳಿ ಆಚರಿಸಿದ್ದಾನೆ ಅನ್ನೊದು ಇದೀಗ ಸದ್ಯ ಸಿಕ್ಕಿರುವ ಮಾಹಿತಿ.

ಉಡುಪಿ (Udupi) ಜಿಲ್ಲೆ ಹಿಂದೆಂದೂ ಕಂಡರಿಯದ ಬರ್ಬರ ಕೃತ್ಯಕ್ಕೆ ಕಳೆದ ಭಾನುವಾರ ಸಾಕ್ಷಿಯಾಗಿತ್ತು.ಘಟನೆ ನಡೆದು ಒಂದು ವಾರ ಕಳೆದ ಬಳಿಕ ಆತ ಕೃತ್ಯಕ್ಕೆ ಬಳಸಿದ್ದ ಚಾಕುವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಘಟನೆ ನಡೆದು ಮೂರನೇ ದಿನಕ್ಕೆ ಪೊಲೀಸರು ಆರೋಪಿಯ ಹೆಡೆಮುರಿ ಕಟ್ಟಿದ್ದರು. ಇದಕ್ಕೆ ಎಲ್ಲೆಡೆ ಶ್ಲಾಘನೆಯೂ ವ್ಯಕ್ತವಾಗಿತ್ತು.ಇದಿಗ ನ್ಯಾಯಾಲಯದ ಮೂಲಕ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಸಾಕಷ್ಟು ಮಾಹಿತಿಗಳು ಸಿಗುತ್ತಿದೆ. ಭಾನುವಾರ ಬೆಳಗ್ಗೆ 9:30 ರಿಂದ 10 ಗಂಟೆಯ ನಡುವೆ ದುಷ್ಕೃತ್ಯ ಎಸಗಿದ ಆರೋಪಿ, ಎರಡು ಬೈಕ್, ಆಟೋರಿಕ್ಷಾ, ಬಸ್ ಮೂಲಕ ಉಡುಪಿ ಜಿಲ್ಲೆಯಿಂದ ಕಾಲ್ಕಿತ್ತಿದ್ದಾನೆ.ಕುಟುಂಬ ಬಲಿ ಪಡೆದ ಬಳಿಕ ಮಹಾರಾಷ್ಟ್ರ (Maharashtra) ಮೂಲದ ಪ್ರವೀಣ್ ಅರುಣ್ ಚೌಗಲೆ ಮುಖಕ್ಕೆ ಮಾಸ್ಕ್ ಹಾಕಿ, ಬಟ್ಟೆ ಬದಲಿಸಿಕೊಂಡು ಮನೆ ಸೇರಿದ್ದಾನೆ. ಮನೆಯಿಂದ ಒಬ್ಬನೇ ಹೊರಗೆ ಬಂದು ಕೈಗೆ ಆಗಿದ್ದ ಗಾಯಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾನೆ. ನಾಲ್ವರಿಗೆ ಚಾಕು ಇರಿತ ಮಾಡುವ ಸಂದರ್ಭದಲ್ಲಿ ಆರೋಪಿಯ ಕೈ ಬೆರಳುಗಳು ಗಾಯಗೊಂಡಿದ್ದವು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಪ್ರವೀಣ್ ಚೌಗಲೆ ಕುಟುಂಬದವರನ್ನು ಕರೆದುಕೊಂಡು ಹೊರಗೆ ಹೋಗಿದ್ದಾನೆ. ಮರುದಿನ ಅಂದರೆ ಸೋಮವಾರ ತನ್ನ ಕಾರಿನಲ್ಲಿ ಮಂಗಳೂರಿನಿಂದ ಹೊರಟು ಬೆಳಗಾವಿಗೆ ತಲುಪಿದ್ದಾನೆ. ಮೂರು ದಿನ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ ಆರೋಪಿ ಬೆಳಗಾವಿ ತಲುಪಿದ ನಂತರ ಫೋನನ್ನು ಆನ್ ಮಾಡಿದ್ದಾನೆ. ಆ ಹೊತ್ತಿಗಾಗಲೇ ಪೊಲೀಸರಿಗೆ ಆರೋಪಿಯ ಬಗ್ಗೆ ಸುಳಿವು ಸಿಕ್ಕಿತ್ತು. ಬೆಳಗಾವಿ ಕುಡುಚಿ ಪೊಲೀಸರ ಸಹಾಯ ಪಡೆದು ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದರು.

Related posts

ಮಲಯಾಳಂ ಸಿನಿಮಾದ ಖ್ಯಾತ ನಟಿ ಸುಭಿ ಸುರೇಶ್ ನಿಧನ

ನೆಲ್ಲೂರು-ಕೆಮ್ರಾಜೆ: ಪತ್ನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪತಿ..! ಭೀಕರ ಕೃತ್ಯದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ,ಶಂಕಿತ ಉಗ್ರ ಶಾರಿಕ್ ಗೆ ಜೀವಬೆದರಿಕೆ,ಜೈಲಿನಲ್ಲಿ ವಿಶೇಷ ಭದ್ರತೆ ವ್ಯವಸ್ಥೆ!