ಕ್ರೀಡೆ/ಸಿನಿಮಾಕ್ರೈಂವೈರಲ್ ನ್ಯೂಸ್

ಆ ರಾಜಕಾರಣಿ ಮದುವೆ ಆಗೋದಾಗಿ ನಂಬಿಸಿ ಮೋಸ ಮಾಡಿದ್ದಾನೆ ಏಂದು ಆರೋಪಿಸಿದ್ದು ಯಾರಿಗೆ? ‘ನಾಗಮಂಡಲ’ ಖ್ಯಾತಿಯ ನಟಿ ಬಿಚ್ಚಿಟ್ಟ ರಹಸ್ಯವೇನು?

202

ನ್ಯೂಸ್ ನಾಟೌಟ್: ಕನ್ನಡದಲ್ಲಿ, ನಾಗಮಂಡಲ, ಸೂರ್ಯವಂಶ, ಸ್ವಸ್ತಿಕ್‌ ಸೇರಿ ಹಲವು ಸಿನಿಮಾಗಳಲ್ಲಿಯೂ ನಟಿಸಿದ್ದ ಆ ಕಾಲದ ಬಹುಬೇಡಿಕೆಯ ನಟಿ ವಿಜಯಲಕ್ಷ್ಮೀ ಈಗ ಹೊಸ ವಿಷಯವೊಂದಕ್ಕೆ ಸುದ್ದಿಯಾಗಿದ್ದಾರೆ. ಆದರೆ, ಇತ್ತೀಚಿನ ಕೆಲ ದಿನಗಳಿಂದ ಬೇಡದ ವಿಚಾರಕ್ಕೇ ಈ ನಟಿ ಸುದ್ದಿಯಾಗುತ್ತಿರುವುದು ಎಲ್ಲರಿಗೂ ಗೊತ್ತಿದೆ ಈಗ ಮತ್ತೊಂದು ಆರೋಪ ಆ ಸಾಲಿಗೆ ಸೇರಿದೆ.

ಹಣಕಾಸಿನ ಸಮಸ್ಯೆ, ಆರೋಗ್ಯ ಸಮಸ್ಯೆಯನ್ನು ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡು ಜೀವ ಕಳೆದುಕೊಳ್ಳುವ ಬಗ್ಗೆ ಹೇಳಿಕೊಂಡಿದ್ದ ಆ ನಟಿ ಈ ಮತ್ತೆ ಸುದ್ದಿಯಲ್ಲಿದ್ದಾರೆ.

ತಮಿಳುನಾಡಿನ ಚೆನ್ನೈ ಮೂಲದ ನಾಮ್ ತಮಿಳರ್ ಕಚ್ಚಿ ಪಕ್ಷದ ಸಂಯೋಜಕ ಸೀಮಾನ್, ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿ, ಚೆನ್ನೈ ಪೊಲೀಸ್‌ ಠಾಣೆಯಲ್ಲಿ ವಿಜಯಲಕ್ಷ್ಮೀ ದೂರು ನೀಡಿದ್ದಾರೆ. ಸೀಮಾನ್‌ ನನ್ನನ್ನು ಮದುವೆಯಾಗುವುದಾಗಿ ಹೇಳಿ ನನ್ನನ್ನು ಬಳಿಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.

ಬೇರೆಯವರ ಕಡೆಯಿಂದ ಜೀವ ಬೆದ* ರಿಕೆಯನ್ನೂ ಹಾಕಿಸುತ್ತಿದ್ದಾನೆ ಎಂದು ದೂರಿನಲ್ಲಿ ವಿಜಯಲಕ್ಷ್ಮೀ ನಮೂದಿಸಿದ್ದಾರೆ. “ಸೀಮಾನ್ ವಿರುದ್ಧ ನನ್ನ ಈ ಹೋರಾಟ ಈಗಿನದಲ್ಲ. 2008ರಲ್ಲೇ ನನ್ನನ್ನು ಮದುವೆಯಾಗಿ ನಂಬಿಸಿದ್ದ. ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಇದೀಗ ತಮಿಳುನಾಡಿನ ಡಿಎಂಕೆ ಸರ್ಕಾರ ಮತ್ತು ಪೊಲೀಸರ ಮೇಲೆ ನನಗೆ ನಂಬಿಕೆ ಇದೆ.ಖಂಡಿತ ಅವರು ನನಗೆ ನ್ಯಾಯ ದೊರಕಿಸಿಕೊಡುತ್ತಾರೆ ಎಂದು ನಂಬಿದ್ದೇನೆ. ಕಳೆದ ಹಲವು ವರ್ಷಗಳಿಂದ ಸೀಮಾನ್ ವಿರುದ್ಧ ಹೋರಾಟ ನಡೆಸುತ್ತಲೇ ಬಂದಿದ್ದೇನೆ. ಈ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ” ಎಂದು ಮಾಧ್ಯಮಗಳ ಮುಂದೆ ವಿಜಯಲಕ್ಷ್ಮೀ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

“ಸೀಮಾನ್ ದೌರ್ಜನ್ಯಕ್ಕೆ ಮಿತಿಯೇ ಇಲ್ಲ. ಆತನ ವಿಡಿಯೋ, ಫೋಟೋಗಳನ್ನು ನಾನು ಬಿಡುಗಡೆ ಮಾಡಲಿದ್ದೇನೆ. ಆದರೆ, ಇದ್ಯಾವುದಕ್ಕೂ ಪ್ರತಿಕ್ರಿಯೆ ನೀಡದ ಆತ, ನನ್ನ ವಿರುದ್ಧವೇ ಕೆಟ್ಟದಾಗಿ ಬಿಂಬಿಸುತ್ತಿದ್ದಾನೆ. ಜನಪ್ರಿಯತೆಗಾಗಿ ಹೀಗೆಲ್ಲ ಮಾಡುತ್ತಿದ್ದೇನೆ ಎಂದು ಎಲ್ಲೆಡೆ ಪುಕಾರು ಹಬ್ಬಿಸುತ್ತಿದ್ದಾನೆ. ಇದೇ ವಿಚಾರವಾಗಿ ಮಾತುಕತೆಗೆ ಬಂದರೆ ಕುಳಿತು ಪರಿಹರಿಸಿಕೊಳ್ಳಬಹುದು. ಆದರೆ, ಆತ ಮಾತ್ರ ಅದ್ಯಾವುದಕ್ಕೂ ಸಿದ್ಧನಿಲ್ಲ. ಹಾಗಾಗಿ ನಾನು ಇಟ್ಟ ಹೆಜ್ಜೆ ಹಿಂದೆ ಇಡುವುದಿಲ್ಲ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ.

See also  ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆ..! ಎಷ್ಟು ರೂ. ಏರಿಕೆ?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget