ರಾಜಕೀಯವೈರಲ್ ನ್ಯೂಸ್

‘ಆದಿಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು ಮಠದ ಹುಡುಗ, ನಾನು ಜೆಡಿಎಸ್ ಗೆ ಬರಲು ಆದಿಚುಂಚನಗಿರಿಯ ಹಿರಿಯ ಸ್ವಾಮೀಜಿಗಳು ಕಾರಣ’, ಸಚಿವ ಜಮೀರ್ ಅಹ್ಮದ್

150

ನ್ಯೂಸ್ ನಾಟೌಟ್: ಆದಿಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು ಮಠದ ಹುಡುಗ. ನಾನು ಜೆಡಿಎಸ್ ಗೆ ಬರಲು ಆದಿಚುಂಚನಗಿರಿಯ ಹಿರಿಯ ಸ್ವಾಮೀಜಿಗಳು ಕಾರಣ ಎಂದು ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಜಮೀರ್ ಅಹ್ಮದ್ ತಿರುಗೇಟು ನೀಡಿದ್ದಾರೆ.

ಮಂಗಳೂರಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಜಮೀರ್, ‘ಸ್ವಾಮೀಜಿ ಬಳಿ ಕೇಳಲು ಹೇಳಿ. ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವ. ಕುಮಾರಸ್ವಾಮಿ ಅವರಲ್ಲಿ ಕೇಳಿ’ ಎಂದು ಹೇಳಿದರು.

‘ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ. ಕುಮಾರಸ್ವಾಮಿ ಮುಸ್ಲಿಮರು ನನಗೆ ಬೇಕಾಗಿಲ್ಲ ಅಂತ ಹೇಳಿದ್ರು. ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ವೋಟ್ ಬೇಡ ಅಂತ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ, ಎಷ್ಟು ಸರಿ ಅಂತ ಕೇಳಿದ್ದು. ಮುಸ್ಲಿಂ ಪಂಚರ್ ಹಾಕುವವರು, ವೆಡ್ಡಿಂಗ್ ಮಾಡುವರು ಅಂತ ಲಘವಾಗಿ ಮಾತಾಡಿದ್ದಾರೆ. ಯಾಕೆ ಅವರ ಬಳಿ ವೋಟ್ ಕೇಳುತ್ತೀರಿ. ನಿನ್ನೆಯೂ ಕುಮಾರಸ್ವಾಮಿ ಅದೇ ಹೇಳಿದ್ದಾರೆ. ಹೌದು ಸ್ವಾಮಿ ನಾವು ಬಡವರು, ನಮ್ಮ ಬಳಿ ಯಾಕೆ ವೋಟ್ ಕೇಳುತ್ತೀರಿ? ಕುಮಾರಸ್ವಾಮಿಗೆ ಅದೇ ಪ್ರಶ್ನೆ’ ಎಂದು ಜಮೀರ್ ಆಕ್ರೋಶ ವ್ಯಕ್ತಪಡಿಸಿದರು. ‘ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂಟರ್ನ್ ಕುಮಾರಸ್ವಾಮಿ ಅಂತ ಅವರಿಗೆ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ. ವೈಯಕ್ತಿಕವಾಗಿ ಕುಮಾರಸ್ವಾಮಿಗೆ ಹೇಳಿರುವುದು. ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ. ಒಕ್ಕಲಿಗರಿಗೆ ಯಾವ ಹೇಳಿಕೆ ನೀಡಿಲ್ಲ’ ಎಂದು ತಿಳಿಸಿದರು.

See also  ನನ್ನ ಮಗಳ ವಯಸ್ಸಿನವಳ ಜತೆ ರೊಮ್ಯಾನ್ಸ್‌ ಮಾಡಲಾರೆ ಎಂದ ಖ್ಯಾತ ತಮಿಳು ನಟ! ಯಾರು ಆ ಕರುನಾಡು ಮೂಲದ ನಟಿ? ಈ ಬಗ್ಗೆ ನಟ ಹೇಳಿದ್ದೇನು?
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget