ಕರಾವಳಿಸುಳ್ಯ

ಅಡ್ಕಾರ್: ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು,ಏನಿದು ಘಟನೆ?

ನ್ಯೂಸ್‌ ನಾಟೌಟ್‌ : ವ್ಯಕ್ತಿಯೊಬ್ಬರು ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಾ.7ರಂದು   ವರದಿಯಾಗಿದೆ.

ಅಡ್ಕಾರ್ ಜಿ.ಅಬ್ದುಲ್ಲಾ ಎಂಬುವವರ ಮನೆಗೆ ಪೈಟಿಂಗ್ ಕೆಲಸಕ್ಕಾಗಿ ಬಂದಿದ್ದ ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬುವವರು ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ‌ ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದಿದ್ದರು.ತಲೆಗೆ ಗಂಭೀರ ಗಾಯಗಳಾಗಿದ್ದ ಹಿನ್ನಲೆ ಕೂಡಲೇ ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಲಾಗಿತ್ತಾದರೂ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ  ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮೃತರು ಪತ್ನಿ ಮೂವರು ಮಕ್ಕಳನ್ನು ಅಗಲಿದ್ದಾರೆ.

—————————

Related posts

ಮಗನಿಗೂ ತುಳು ಭಾಷೆಯನ್ನು ಕಲಿಸಿದ್ದರು ನಟಿ ಲೀಲಾವತಿ ಅಮ್ಮ..!,ಕೊನೆಯವರೆಗೂ ಅಮ್ಮ ಮತ್ತು ಮಗ ಮಾತನಾಡಿದ್ದೂ ತುಳುವಿನಲ್ಲೇ..!

ಪ್ರತಿಭೆ ಪ್ರದರ್ಶಿಸಲು ಅವಕಾಶ ಕಲ್ಪಿಸುವ ಕಾರ್ಯಕ್ರಮ ಧವಲಾ ಸಿರಿ -ಶಾಸಕ ಕೋಟ್ಯಾನ್,ಸಮಯ ಪ್ರಜ್ಞೆ ಇರುವವನನ್ನು ಸಮಯವೇ ಕಾಪಾಡುತ್ತದೆ:ನಟ ಅರವಿಂದ ಬೋಳಾರ್

ಭೂ ಕುಸಿತದಿಂದ ನಿಂತಿದ್ದ ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ, 12 ದಿನದ ಬಳಿಕ ಕಾರ್ಯಾರಂಭ