ಕ್ರೈಂವೈರಲ್ ನ್ಯೂಸ್

ಗುಟ್ಕಾ ಜಾಹೀರಾತು ನೀಡಿದ್ದ ಶಾರುಖ್, ಅಕ್ಷಯ್, ಅಜಯ್ ದೇವಗನ್ ಗೆ ಶಾಕ್ ನೀಡಿದ್ದೇಗೆ ಕೋರ್ಟ್? ತಾನೇ ನಟಿಸಿದ್ದ ಗುಟ್ಕಾ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ನೀಡಿದ್ದೇಕೆ ಅಮಿತಾಬ್ ಬಚ್ಚನ್?

177

ನ್ಯೂಸ್‌ ನಾಟೌಟ್‌: ಗುಟ್ಕಾ ಕಂಪನಿಗಳಿಗೆ ಜಾಹೀರಾತು ಸಂಬಂಧ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲೂ ಇದೇ ವಿಷಯದ ವಿಚಾರಣೆ ನಡೆಯುತ್ತಿದ್ದು, ತ್ವರಿತ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಕೇಂದ್ರದ ವಕೀಲರು ಶುಕ್ರವಾರ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಮನವಿ ಆಲಿಸಿದ ನಂತರ ಪೀಠ ವಿಚಾರಣೆಯನ್ನು ಮೇ 9, 2024ಕ್ಕೆ ನಿಗದಿಪಡಿಸಿದೆ ಎನ್ನಲಾಗಿದೆ.

ಗುಟ್ಕಾ ಕಂಪನಿಗಳ ಜಾಹೀರಾತಿನಲ್ಲಿ ಪಾಲ್ಗೊಂಡಿರುವ ನಟರು ಮತ್ತು ಗಣ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಾದಿಸಿರುವ ಅರ್ಜಿದಾರರ ಪ್ರಾತಿನಿಧ್ಯವನ್ನು ನಿರ್ಧರಿಸುವಂತೆ ನ್ಯಾಯಮೂರ್ತಿ ರಾಜೇಶ್ ಸಿಂಗ್ ಚೌಹಾಣ್ ಇದ್ದ ಪೀಠವು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು ಎನ್ನಲಾಗಿದೆ.

ಅಕ್ಟೋಬರ್ 22ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿದಾರರು ವಾದಿಸಿದ್ದರು. ಆ ಬಳಿಕ, ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಕೇಂದ್ರ ಸರ್ಕಾರದ ಸಂಪುಟ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತ್ತು.

ಶುಕ್ರವಾರ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಸ್‌.ಬಿ. ಪಾಂಡೆ, ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್ ಗೆ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಹೈಕೋರ್ಟ್‌ಗೆ ತಿಳಿಸಿದರು.

ಅಮಿತಾಬ್ ಬಚ್ಚನ್ ಗುಟ್ಕಾ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಅವರು ಈಗಾಗಲೇ ತಮ್ಮ ಒಪ್ಪಂದವನ್ನು ರದ್ದುಗೊಳಿಸಿದ್ದರೂ ಸಹ ಅವರ ಜಾಹೀರಾತು ತೋರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

See also  ಗುಳಿಗ ಕಟ್ಟೆಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಫೋಟೋ ಪ್ರಕಟಿಸಿದ ಯುವಕ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget