Latestಕರಾವಳಿಕ್ರೈಂಮಂಗಳೂರುರಾಜ್ಯ

ಸುಹಾಸ್‌ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಮುಖಂಡನಿಗೆ ಜೀವ ಬೆದರಿಕೆ..! ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್..!

2.3k

ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಮೇ 1ರಂದು ಕೊಲೆಯಾಗಿದ್ದ, ಪ್ರಕರಣವನ್ನ ಬೇಧಿಸಿರುವ ಪೊಲೀಸರು 8 ಜನ ಆರೋಪಿಗಳನ್ನ ಬಂಧಿಸಿದ್ದಾರೆ. ಈಗಲೂ ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ಸ್ಥಿತಿಯಿದೆ. ಈ ಮಧ್ಯೆ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಜೀವ ಬೆದರಿಕೆ ಹಾಕಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಮುಂದಿನ ಟಾರ್ಗೆಟ್  ಭರತ್ ಕುಮ್ಡೇಲ್​ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ.

ಸುಹಾಸ್ ಶೆಟ್ಟಿ ಬೆನ್ನಲ್ಲೇ  ಹಿಂದೂ ಮುಖಂಡ ಭರತ್ ಕುಮ್ಡೇಲ್ ಗೆ ಜೀವ ಬೆದರಿಕೆ ಹಾಕಿದ ಪೋಸ್ಟ್ ವೈರಲ್ ಆಗುತ್ತಿದೆ. 5/5/2025ರ ರಾತ್ರಿ 9:30ಕ್ಕೆ ಅವರ ಸ್ಥಳದಲ್ಲೇ ಕೊಲೆ ಮಾಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಸುಹಾಸ್ ಶೆಟ್ಟಿಯ ಫೋಟೋದಲ್ಲಿ ರೈಟ್ ಚಿಹ್ನೆ ಹಾಕಿ ವಿಕೃತಿ ಮೆರೆದಿದ್ದಾರೆ. ಇದರಿಂದ ಕರಾವಳಿ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.

ಹಿಂದೂ ಮುಖಂಡ ಭರತ್ ಕುಮ್ಡೇಲು SDPI ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಶ್ರಫ್ ಕಲಾಯಿ ಎಂಬಾತ 2017 ರ ಜೂನ್ 21 ರಂದು ಹತ್ಯೆಯಾಗಿದ್ದ. ಈತನನ್ನು ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಪಾಕ್‌ ಗೆ ಭಾರತದ ಸೇನಾ ಮಾಹಿತಿ ರವಾನಿಸುತ್ತಿದ್ದ ಇಬ್ಬರು ಅರೆಸ್ಟ್‌..! ಆರೋಪಿಗಳು ಅಮೃತಸರ ಕೇಂದ್ರ ಜೈಲಿಗೆ..!

ಮೈಸೂರು ಚಾಮುಂಡೇಶ್ವರಿ ದೇವಾಲಯದ ಸುತ್ತ-ಮುತ್ತ ವ್ಯಾಪಾರಕ್ಕೆ ನಿರ್ಬಂಧ..! ದೇವಾಲಯದ ಅಭಿವೃದ್ಧಿ ಪ್ರಾಧಿಕಾರದಿಂದ ಆದೇಶ

ಪಾಕಿಸ್ತಾನಿ ಮಹಿಳೆಯನ್ನು ಮದುವೆಯಾಗಿದ್ದ CRPF​ ಯೋಧ ಸೇವೆಯಿಂದ ವಜಾ..! ವೀಸಾ ಅವಧಿ ಮುಗಿದಿದ್ದರೂ ಆಕೆಯನ್ನು ಭಾರತದಲ್ಲೇ ಬಚ್ಚಿಟ್ಟಿದ್ದ ಜವಾನ..!

See also  ಪೊಲೀಸರನ್ನೇ ಮರವನ್ನೇರಿಸಿದ ಖತರ್ನಾಕ್ ಕಳ್ಳ..! ಅಷ್ಟಕ್ಕೂ ಪೊಲೀಸರು ಮರವನ್ನೇರಿದ್ದೇಕೆ ಗೊತ್ತಾ?
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget