ಕರಾವಳಿಕೃಷಿ ಸಂಪತ್ತುಸಾಧಕರ ವೇದಿಕೆ

ಕೃಷಿ ವಿಜ್ಞಾನಿ, ಬೆಳುವಾಯಿಯ ಸೋನ್ಸ್‌ ಫಾರ್ಮ್‌ನ ಡಾ.ಎಲ್. ಸಿ. ಸೋನ್ಸ್ ನಿಧನ

245

ನ್ಯೂಸ್ ನಾಟೌಟ್‌: ಕೃಷಿಯಲ್ಲಿ ವಿವಿಧ ಆವಿಷ್ಕಾರಗಳನ್ನು ಮಾಡಿರುವ ಕೃಷಿ ವಿಜ್ಞಾನಿ ಮೂಡುಬಿದಿರೆ ಸಮೀಪದ ಬೆಳುವಾಯಿಯ ಡಾ.ಎಲ್. ಸಿ. ಸೋನ್ಸ್ ಅವರು ಬುಧವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಭಾರತದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ಪದವಿಗಳನ್ನು ಪಡೆದು ಅಮೆರಿಕದ ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ, ಕರ್ನಾಟಕದ ಕೃಷಿ ಚರಿತ್ರೆಯಲ್ಲಿ ದಾಖಲಾರ್ಹ ಹೆಸರು ಮಾಡಿದ ಡಾ. ಲಿವಿಂಗ್‌ಸ್ಟನ್ ಚಂದ್ರಮೋಹನ ಸೋನ್ಸ್ ಕರ್ನಾಟಕದ ಕೃಷಿಕರ ಪಾಲಿಗೆ ಮಾದರಿಯಾಗಿದ್ದರು.

ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಬೇಧ, ದೇಶ-ವಿದೇಶಗಳ ಹಣ್ಣು-ತರಕಾರಿ ಪ್ರಬೇಧಗಳನ್ನು ಮೂಡುಬಿದಿರೆ ಬನ್ನಡ್ಕದ ಮಣ್ಣಿನಲ್ಲಿ ಬೆಳೆಸಿ, ಅದರಿಂದ ಫಸಲು ಹಾಗೂ ಲಾಭಗಳಿಸಿದವರಾಗಿದ್ದಾರೆ. ಜಲ ತಜ್ಞರಾಗಿಯೂ ವಿಶೇಷ ಪರಿಣಿತಿ ಹೊಂದಿದ್ದರು. ಸೋನ್ಸ್ ಪ್ರಪಂಚದ ಕೃಷಿಯನ್ನು ನೋಡಿದವರು. ಅದೇ ಉದ್ದೇಶದಿಂದ ದೇಶ ಸುತ್ತಿ ಕೋಶ ಓದಿದವರು, ಬೀಜ, ಹವಾಮಾನ, ಪೋಷಣೆ, ಮಾರುಕಟ್ಟೆ ಇತ್ಯಾದಿಗಳನ್ನು ಅಧ್ಯಯನ ಮಾಡಿದವರು.

ನಾಲ್ಕೈದು ದಶಕಗಳ ಹಿಂದೆಯೇ ತಮಗೆ ಬೇಕಾದ ಗಿಡಗಳನ್ನು ವಿದೇಶಗಳಿಂದ ವಿಮಾನದಲ್ಲಿ ತರಿಸಿದವರು. ಅಂಥ ಗಿಡಮೂಲಗಳಿಂದಲೇ ಕಸಿ ಕಟ್ಟುವಿಕೆ, ನರ್ಸರಿ ಮೂಲಕ ಗಿಡ ವೃದ್ಧಿಸಿ ಹಂಚಿದವರು. ರಂಬುಟಾನ್, ಮ್ಯಾಂಗೋಸ್ಟಿನ್, ಅನಾನಸು, ತೆಂಗು, ಬಿದಿರು ಕೃಷಿಗೆ ಸೋನ್ಸ್ ಈಗಲೂ ಐಕಾನ್. ಇಂತಹ ಸೋನ್ಸರ ಬಗ್ಗೆ ‘ಸೋನ್ಸ್‌ ಬಿತ್ತಿದ ಫಲ ಪ್ರಪಂಚ -ಸೋನ್ಸ್‌ ಫಾರ್ಮ್’ ಎಂಬ ಪುಸ್ತಕ ಬರೆದಿದ್ದರು. ಅದರ ಏ.16ರಂದು ಬಿಡುಗಡೆಯಾಗಬೇಕಿತ್ತು. ಮೂಡುಬಿದಿರೆಯ ಅವರ ಅಭಿಮಾನಿಗಳು ಈ ಕಾರ್ಯಕ್ರಮವನ್ನು ‘ಕನ್ನಡಭವನ’ದಲ್ಲಿ ಆಯೋಜಿಸಿದ್ದರು. ಸ್ವತಃ ಮೋಹನ ಆಳ್ವ ಅವರೇ ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಿದ್ದರು. ಆದರೆ ಅದಕ್ಕೂ ಮೊದಲೇ ಸೋನ್ಸ್‌ ಇನ್ನಿಲ್ಲವಾದರು.

See also  ಮಗಳನ್ನೇ 'ಗರ್ಭವತಿ' ಮಾಡಿದ ಪುರೋಹಿತ ಮಲತಂದೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget