ಕ್ರೈಂ

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು

770

ಕಾರ್ಕಳ: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿ 4 ಮಂದಿ ದಾರುಣ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಮೃತಪಟ್ಟ ನಾಲ್ವರು ಕಾರ್ಕಳದ ಮಿಯ್ಯಾರಿನವರು ಎಂದು ತಿಳಿದುಬಂದಿದೆ. ಘಟನೆಯ ಪರಿಣಾಮ ಐವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9 ನೇ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಚಾಲಕ ನಿಯಂತ್ರಣ ತಪ್ಪಿ ಲಾರಿ ಪ್ರಪಾತಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ. ಈ ಘಟನೆಯಲ್ಲಿ ನಾಲ್ಕು ಮಂದಿ ಸಾವನಪ್ಪಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳು ಮಣಿಪಾಲು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗು ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಮೇಲಕ್ಕೆತ್ತಲು ಸ್ಥಳೀಯರು ಸಹಕರಿಸಿದ್ದಾರೆ.

See also  ನಟಿ ಜ್ಯೋತಿ ರೈ ಎನ್ನಲಾದ ಅಶ್ಲೀಲ ಖಾಸಗಿ ವಿಡಿಯೊಗಳು ವೈರಲ್..? ದೂರು ಕೊಟ್ಟ ನಟಿ, ಪ್ರಜ್ವಲ್ ರೇವಣ್ಣ ಕೇಸ್ ಬೆನ್ನಲ್ಲೇ ಸಾಲು-ಸಾಲು ಪ್ರಕರಣಗಳು ಬಯಲಿಗೆ..!
  Ad Widget   Ad Widget     Ad Widget   Ad Widget   Ad Widget   Ad Widget