ಕರಾವಳಿ

ಅಜ್ಜಾವರದಲ್ಲಿ ಚಿರತೆ, ಮರಿ ಚಿರತೆ ಪ್ರತ್ಯಕ್ಷ, ಊರವರಲ್ಲಿ ಆತಂಕ, ಅರಣ್ಯ ಇಲಾಖೆ ಮೌನ

ಸುಳ್ಯ: ಅಜ್ಜಾವರ ಗ್ರಾಮದ ಮುಂಡೋಲಿಮೂಲೆ ಸೂರ್ಯ ಎಂಜಿ ಎನ್ನುವವರ ತೋಟದಲ್ಲಿ ಎರಡು ಚಿರತೆ ಪ್ರತ್ಯಕ್ಷವಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳೆದ ಎರಡು ದಿನಗಳಿಂದ ಕಾಣಿಸಿಕೊಂಡಿದ್ದ ಚಿರತೆ ತನ್ನ ಮರಿ ಚಿರತೆಯ ಜತೆಗೆ ಗ್ರಾಮದಲ್ಲಿ ಸುತ್ತಾಟ ನಡೆಸುತ್ತಿದೆ. ಸೂರ್ಯ ಅವರ ತೋಟದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಹಾಗೂ ಅದರ ಮರಿ ಗುರುವಾರ ಮನೆ ಕೆಲಸದವನು ಕೆಲಸ ಬಿಟ್ಟು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮತ್ತೆ ದಾರಿಯಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಹಲವು ಜನರಿಗೂ ಕಾಣಿಸಿಕೊಂಡಿದೆ. ಆದರೆ ಅರಣ್ಯಾಧಿಕಾರಿಗಳಾಗಲಿ ಅಥವಾ ಸ್ಥಳೀಯ ಆಡಳಿತಾಧಿಕಾರಿಗಳಾಗಲಿ ಇದುವರೆಗೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ನ್ಯೂಸ್ ನಾಟೌಟ್ ತಂಡದ ಜತೆಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಸುಳ್ಯ:ಐವರ್ನಾಡಿನ ಪ್ರಗತಿಪರ ಕೃಷಿಕನಿಗೊಲಿದ ‘ಐಕಾನಿಕ್ ಆಫ್ ಇಂಡಿಯನ್ ಅವಾರ್ಡ್ 2023 ‘,42ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಇಂದು(ಜೂ.15) ದರ್ಶನ್ ಆ್ಯಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ

ಕೊರೊನಾ ಪ್ರಕರಣದಲ್ಲಿ ಹೆಚ್ಚಳ : ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಹೊಸ ಮಾರ್ಗಸೂಚಿ ಪ್ರಕಟ