Latestಕ್ರೈಂದೇಶ-ವಿದೇಶರಾಜಕೀಯವೈರಲ್ ನ್ಯೂಸ್

ತೀವ್ರಗೊಂಡ ಯುದ್ಧ: ಇರಾನ್ ನ ಟೆಹರಾನ್‌ ನಲ್ಲಿರುವ ಭಾರತೀಯರು ತಕ್ಷಣ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸೂಚನೆ..! 24×7 ತುರ್ತು ಸಹಾಯವಾಣಿ ಆರಂಭಿಸಿದ ಭಾರತ..!

554

ನ್ಯೂಸ್ ನಾಟೌಟ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿರುವುದರಿಂದ ಟೆಹರಾನ್‌ ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ಮಂಗಳವಾರ(ಜೂ.17) ತಕ್ಷಣವೇ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ತಮ್ಮ ಸ್ಥಳ ಮತ್ತು ಸಂಪರ್ಕ ಸಂಖ್ಯೆಗಳನ್ನು ಒದಗಿಸುವಂತೆ ಕೋರಲಾಗಿದೆ.

ತಮ್ಮ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಂಡು ಟೆಹರಾನ್‌ ನಿಂದ ಹೊರಹೋಗಲು ಸಾಧ್ಯವಿರುವ ಎಲ್ಲ ಭಾರತೀಯ ಪ್ರಜೆಗಳು ನಗರದ ಹೊರಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಭಾರತೀಯ ಮಿಷನ್ ಸಲಹೆ ನೀಡಿದೆ.

ಟೆಹರಾನ್‌ನಲ್ಲಿರುವ ಮತ್ತು ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರದ ಎಲ್ಲ ಭಾರತೀಯ ಪ್ರಜೆಗಳು ತಕ್ಷಣ ಭಾರತದ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಮತ್ತು ಅವರ ಸ್ಥಳ ಹಾಗೂ ಸಂಪರ್ಕ ಸಂಖ್ಯೆಗಳನ್ನು ಒದಗಿಸುವಂತೆ ಕೋರಲಾಗಿದೆ. +989010144557; +989128109115; +989128109109 ಮೂಲಕ ಸಂಪರ್ಕಿಸುವಂತೆ ಟೆಹ್ರರಾನ್‌ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.

ಇರಾನ್ ಮತ್ತು ಇಸ್ರೇಲ್‌ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಸಚಿವಾಲಯದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಶುಕ್ರವಾರ ಮುಂಜಾನೆ ಇರಾನ್‌ ನ ಪರಮಾಣು, ಕ್ಷಿಪಣಿ ಮತ್ತು ಮಿಲಿಟರಿ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ಮಾಡಿತ್ತು. ನಂತರ ಇರಾನ್, ಇಸ್ರೇಲ್ ಮೇಲೆ ಪ್ರತೀಕಾರದ ದಾಳಿಗಳನ್ನು ಪ್ರಾರಂಭಿಸಿತ್ತು. ಬಳಿಕ ಯುದ್ಧ ತೀವ್ರಗೊಂಡಿದೆ.

ಟೆಹರಾನ್‌ ನಲ್ಲಿರುವ ಭಾರತದ ರಾಯಭಾರ ಕಚೇರಿಯು 24×7 ತುರ್ತು ಸಹಾಯವಾಣಿಯನ್ನು ಸ್ಥಾಪಿಸಿದೆ.

ಟೆಹರಾನ್‌ ನ ತುರ್ತು ಸಹಾಯವಾಣಿ ಸಂಖ್ಯೆ: +98 9128109115, +98 9128109109; ವಾಟ್ಸ್‌ ಆ್ಯಪ್ ಸಂಖ್ಯೆ: +98 901044557, +98 9015993320, +91 8086871709, ಬಂದರ್ ಅಬ್ಬಾಸ್: +98 9177699036, ಜಹೇದನ್: +98 9396356649 ಸಂಖ್ಯೆಗೂ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಮಂಗಳೂರು: ತಂದೆ ಸೇದಿ ಎಸೆದಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು..! ಗಂಡನ ವಿರುದ್ಧ ದೂರು ನೀಡಿದ ಮಗುವಿನ ತಾಯಿ..!

See also  ಡಿವೋರ್ಸ್‌ ವದಂತಿ ಮಧ್ಯೆಯೂ ಒಟ್ಟಿಗೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಸ್ಟಾರ್‌ ದಂಪತಿ!!;ಇಸ್ಕಾನ್ ಗೆ ಭೇಟಿ ನೀಡಿ ಆಶೀರ್ವಾದ ಪಡೆದ ಅಭಿಷೇಕ್ ಬಚ್ಚನ್-ಐಶ್ವರ್ಯ ರೈ !!
  Ad Widget   Ad Widget   Ad Widget   Ad Widget   Ad Widget   Ad Widget   Ad Widget