Latestಕ್ರೈಂಬೆಂಗಳೂರುವೈರಲ್ ನ್ಯೂಸ್

ಆಲೋವೆರಾ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಔಷಧ ಇಟ್ಟಿದ್ದ ಪೋಷಕರು..! 9ನೇ ತರಗತಿ ಬಾಲಕಿ ಸಾವು..!

661
Pc Cr: Public Tv

ನ್ಯೂಸ್‌ ನಾಟೌಟ್: ಆಲೋವೆರಾ ಜ್ಯೂಸ್(Aloevera Juice) ಎಂದು ಬಾಲಕಿಯೊಬ್ಬಳು ಕ್ರಿಮಿನಾಶಕ ಸೇವಿಸಿದ್ದು, ಪೋಷಕರ ನಿರ್ಲಕ್ಷ್ಯಕ್ಕೆ ಬಲಿಯಾಗಿರುವ ಘಟನೆ ಮೈಸೂರು ರಸ್ತೆಯ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ(Byatarayanapura) ನಡೆದಿದೆ.
9ನೇ ತರಗತಿ ವಿದ್ಯಾರ್ಥಿನಿ ನಿಧಿ ಕೃಷ್ಣ(14) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯು ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ಆಲೋವೆರಾ ಜ್ಯೂಸ್ ಕುಡಿಯುತ್ತಿದ್ದಳು. ಆದರೆ ಆಲೋವೆರಾ ಡಬ್ಬದಲ್ಲಿ ಗಿಡಗಳಿಗೆ ಬಳಸುವ ಹರ್ಬಿಸೈಡ್ ಔಷಧವನ್ನು ಮನೆಯವರು ತುಂಬಿಟ್ಟಿದ್ದರು.

ಮಾ. 18ರಂದು ಬಾಲಕಿ ಜ್ಯೂಸ್ ಎಂದು ಕ್ರಿಮಿನಾಶಕ ಸೇವಿಸಿದ್ದಳು. ಬಳಿಕ ಅನಾರೋಗ್ಯದ ಹಿನ್ನಲೆ ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಾ. 31ರಂದು ಬಾಲಕಿ ಸಾವನ್ನಪ್ಪಿದ್ದಾಳೆ. ವಿಷಯ ತಡವಾಗಿ ದೃಢಪಟ್ಟಿದೆ.

ಮೈಸೂರು ರಸ್ತೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ಅತ್ತೆ, ಮಗಳು, ನಾದಿನಿಗೆ ಗುಂಡಿಕ್ಕಿ ಹತ್ಯೆ ಮಾಡಿದ ವ್ಯಕ್ತಿ..! ಸೆಲ್ಫಿ ವಿಡಿಯೋ ಮಾಡಿ ಆರೋಪಿಯೂ ಆತ್ಮಹತ್ಯೆ..!

ನಾಳೆ(ಎ.2) ಮತ್ತೆ ನಟ ದರ್ಶನ್ ಪ್ರಕರಣದ ವಿಚಾರಣೆ..! ಜಾಮೀನು ರದ್ದು ಕೋರಿ ಸುಪ್ರಿಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ವಕೀಲರು..!

See also  ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಎಚ್‌.ಡಿ ದೇವೇಗೌಡ ಮತ್ತು ಎಚ್‌.ಡಿ.ಕೆ ಹೆಸರು ಬಳಸದಂತೆ ಕೋರ್ಟ್‌ನಿಂದ ತಡೆಯಾಜ್ಞೆ..! ತೀವ್ರಗೊಂಡ ರೇವಣ್ಣ ವಿಚಾರಣೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget