ಕರಾವಳಿಜೀವನ ಶೈಲಿ/ಆರೋಗ್ಯದಕ್ಷಿಣ ಕನ್ನಡದೇಶ-ವಿದೇಶಪುತ್ತೂರುಮಹಿಳೆ-ಆರೋಗ್ಯರಾಜ್ಯವೈರಲ್ ನ್ಯೂಸ್ಸುಳ್ಯ

ಕೇರಳದಲ್ಲಿ ಮೆದುಳನ್ನೇ ತಿನ್ನುವ ಅಪರೂಪದ ಅಮೀಬಾ ಸೋಂಕು ಪತ್ತೆ..! ದ.ಕ ಜಿಲ್ಲೆಯಲ್ಲಿ ಹೈ ಅಲರ್ಟ್..!

ನ್ಯೂಸ್ ನಾಟೌಟ್: ಮೆದುಳು ತಿನ್ನುವ ಅಮೀಬಾ ಸೋಂಕಿನ (Amoeba Infection) ಪ್ರಕರಣಗಳು ಕೇರಳದಲ್ಲಿ ಹೆಚ್ಚಾಗುತ್ತಿದ್ದು ಭಾರಿ ಆತಂಕ ಮೂಡಿಸಿದೆ, ಈ ಕಾರಣದಿಂದ ಕೇರಳ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲೂ ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಿಸಿದೆ.

ಕೇರಳದಲ್ಲಿ ಈವರೆಗೆ ನಾಲ್ಕು ಮಕ್ಕಳು ಈ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ಕೇರಳದಲ್ಲಿ ಅಮೀಬಾ ಸೋಂಕು ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಮಾಹಿತಿಗೆ ಸೂಚಿಸಲಾಗಿದೆ.

ಕಲುಷಿತ ನೀರಿನಲ್ಲಿರುವ ಪರಾವಲಂಬಿಯಲ್ಲದ ಅಮೀಬಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಹರಡುತ್ತದೆ. ಮೂಗಿನ ಮೂಲಕ ನಮ್ಮ ಶರೀರ ಸೇರುವ ಸೂಕ್ಷ್ಮಾಣು ಜೀವಿ, ಮೆದುಳಿನ ಅಂಗಾಂಶಕ್ಕೆ ಭಾರೀ ಹಾನಿ ಉಂಟುಮಾಡುತ್ತದೆ. ಇದರಿಂದ ಸಾವು ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಸೋಂಕು ಹರಡುವ ಆತಂಕದ ಹಿನ್ನೆಲೆ ಗಡಿ ಭಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಲುಷಿತ ನೀರಿನಲ್ಲಿ ಈಜಾಡಿದವರಲ್ಲಿ ಸೋಂಕು ಕಂಡು ಬರುತ್ತಿದೆ. ಹೀಗಾಗಿ ಮಳೆ ನೀರು ನಿಂತ ಹೊಂಡಗಳಲ್ಲಿ, ಕಲುಷಿತ ನೀರಿನಲ್ಲಿ ಈಜಾಡದಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಭೆ ನಡೆಸಿದ್ದು ಸೋಂಕು ಹರಡದಂತೆ ತಡೆಯಲು ಕಲುಷಿತ ಜಲಮೂಲಗಳಲ್ಲಿ ಸ್ನಾನ ಮಾಡದಂತೆ ಸಲಹೆಗಳನ್ನು ನೀಡಿದ್ದಾರೆ.

Click 👇

https://newsnotout.com/2024/07/puri-jagannatha-kannada-news-ratha-devotees-are-j-incident
https://newsnotout.com/2024/07/15-days-old-neo-notal-baby-kannada-news-father-under-police-custody

Related posts

ಶಬರಿಮಲೆಗೆ ಹೋದ ಸುಳ್ಯದ ಅಯ್ಯಪ್ಪ ಮಾಲಾಧಾರಿಗಳು ಮಾಡಿದ್ದೇನು?

ಉಕ್ರೇನ್ ದಂಪತಿಯ ಮಗುವನ್ನು ರಕ್ಷಿಸಿದ ಸ್ವಾಮಿ ಕೊರಗಜ್ಜ ..!

“ಮಾನ್ಯ ಸಭಾಧ್ಯಕ್ಷರೇ….ಆಷಾಡದ ಬಳಿಕ ಶ್ರಾವಣ ಬಂದೇ ಬರುತ್ತದೆ.. ನೆನಪಿಡಿ” ಸದನದಿಂದ ಅಮಾನತು ಖಂಡಿಸಿ ಸ್ಪೀಕರ್‌ಗೆ ಪತ್ರ ಬರೆದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಹೀಗೆ ಹೇಳಿದ್ಯಾಕೆ..?