Latestಕ್ರೈಂವೈರಲ್ ನ್ಯೂಸ್

ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು 1ಲಕ್ಷ ರೂ.ಗೆ ಬೇಡಿಕೆ..! ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ..!

703

ನ್ಯೂಸ್ ನಾಟೌಟ್: ಅಂಗನವಾಡಿ ಸಹಾಯಕಿಯ ಗೈರು ಹಾಜರಾತಿ ಸಕ್ರಮಗೊಳಿಸಲು ಒಂದು ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ ಸಿಡಿಪಿಓ ವನಜಾಕ್ಷಿ ಇಂದು(ಎ.4) ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಗೈರು ಹಾಜರಿ ಸಕ್ರಮಗೊಳಿಸಿ ವೇತನ ಬಿಡುಗಡೆ ಮಾಡಲು ಸಿಡಿಪಿಓ ಒಂದು ಲಕ್ಷ ರೂ. ವರೆಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ನಗರದ ಯಾದಗಿರಿ ಬಸ್ ನಿಲ್ದಾಣದ ಬಳಿ 80 ಸಾವಿರ ರೂ. ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ.

ಯಾದಗಿರಿ ಲೋಕಾಯುಕ್ತ ಡಿವೈಎಸ್ಪಿ ಜೆ.ಹೆಚ್.ಇನಾಮದಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಪಿಐ ಸಿದ್ದರಾಯ, ಸಂಗಮೇಶ ಹಾಗೂ ಇತರ ಲೋಕಾಯುಕ್ತ ಸಿಬ್ಬಂದಿ ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

See also  ವಿದ್ಯಾರ್ಥಿನಿಯನ್ನು ಗಮನಿಸದೆ ಶಾಲಾ ಕೊಠಡಿಗೆ ಬೀಗ ಹಾಕಿ ಹೋದ ಶಿಕ್ಷಕರು! 1 ನೇ ತರಗತಿ ವಿದ್ಯಾರ್ಥಿನಿ ಗಣೇಶನ ಪವಾಡದಿಂದ ಬದುಕಿದ್ದು ಹೇಗೆ? ಮುಂದೇನಾಯ್ತು?
  Ad Widget   Ad Widget   Ad Widget   Ad Widget   Ad Widget   Ad Widget   Ad Widget