ಭಕ್ತಿಭಾವ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ಮುಜರಾಯಿ ಸಚಿವರಿಗೆ ಎಸ್‌.ಅಂಗಾರ ವಿವರ

ಸುಳ್ಯ : ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿರುವ ಮೂರನೇ ಹಂತದ ಕಾಮಗಾರಿಗಳ ಬಗ್ಗೆ ರಾಜ್ಯದ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಸುಳ್ಯ ಕ್ಷೇತ್ರದ ಶಾಸಕ ಸಚಿವ ಎಸ್ ಅಂಗಾರ ನೇತೃತ್ವದಲ್ಲಿ  ವಿಕಾಸ ಸೌಧದ ಕಚೇರಿಗೆ ಭೇಟಿ ನೀಡಿ ವಿವರಗಳನ್ನು ನೀಡಲಾಯಿತು.  ಈ ಸಂದರ್ಭದಲ್ಲಿ ಈ ಯೋಜನೆಯ ಬಗ್ಗೆ ಮುಜರಾಯಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಇದುವರೆಗೆ ಮೊದಲ ಮತ್ತು ಎರಡನೇ ಹಂತದಲ್ಲಿ ನಡೆದಿರುವಂತಹ ಕಾಮಗಾರಿಗಳ ವಿವರಗಳನ್ನು ಕೂಡ ನೀಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ನಡೆಯುವ ಕಾರ್ಯಚಟುವಟಿಕೆಗಳ, ಸೇವೆಗಳ ವಿವರಗಳನ್ನು ಪಡೆದುಕೊಂಡರು. ಆದಷ್ಟು ಶೀಘ್ರದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು. ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್, ಸುಳ್ಳಿ ಸದಸ್ಯ ಪ್ರಸನ್ನ ದರ್ಬೆ, ಪ್ರಮುಖರಾದ ಎ ವಿ ತೀರ್ಥರಾಮ, ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ರಾಕೇಶ್ ರೈ ಕೆಡೆಂಜಿ, ಸುಭೋದ್ ಶೆಟ್ಟಿ ಮೇನಾಲ ಉಪಸ್ಥಿತರಿದ್ದರು.

Related posts

ಜಗದ್ಗುರು ಡಾ. ಶ್ರೀ ಬಾಲಗಂಗಾಧರನಾಥ ಮಹಾಸ್ವಾಮಿಗಳ ೭೮ನೇ ಜಯಂತ್ಸೋತ್ಸವಕ್ಕೆ ಸಿದ್ಧತೆ

ಸುಳ್ಯ: ಚೆನ್ನಕೇಶವ ದೇವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ, ಹಸಿರುವಾಣಿ ಮೆರವಣಿಗೆ

ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿಗೆ ಜೆ.ಪಿ. ನಡ್ಡಾಗೆ ಮನವಿ