ಕರಾವಳಿದೇಶ-ಪ್ರಪಂಚದೇಶ-ವಿದೇಶರಾಜಕೀಯವೈರಲ್ ನ್ಯೂಸ್

ಸೋತರೂ ಮೋದಿಯ ಸಂಪುಟ ಸೇರ್ತಾರಾ ಅಣ್ಣಾಮಲೈ..? ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್ ನಾಟೌಟ್: ತಮಿಳುನಾಡಿನಲ್ಲಿ ಬಿಜೆಪಿಯ ಮತಗಳಿಕೆ ಹಿಂದೆಂದಿಗಿಂತಲೂ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಾಗಿದೆ. ಇದರ ಹಿಂದಿನ ಶಕ್ತಿ ಪಕ್ಷದ ರಾಜ್ಯಾಧ್ಯಕ್ಷ ಅಣ್ಣಾಮಲೈ ಎನ್ನಲಾಗಿದೆ. ಈ ಹಿನ್ನೆಲೆ ಅಣ್ಣಾ ಮಲೈ ಚುನಾವಣೆಯಲ್ಲಿ ಸೋತಿದ್ದರೂ, ಪಕ್ಷದ ವರ್ಚಸ್ಸು ಹೆಚ್ಚಾಗಿರುವ ಕಾರಣ ಮೋದಿ ಸಂಪುಟ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಅಣ್ಣಾಮಲೈ ಈ ಕುರಿತು ಈಗಾಗಲೇ ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಹಿಂದೆ ಪಕ್ಷದ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದವರಿಗೆ ಸಚಿವ ಸ್ಥಾನ, ರಾಜ್ಯಪಾಲರ ಸ್ಥಾನ ನೀಡಿದಂತೆಯೇ ಈ ಬಾರಿಯೂ ಪಕ್ಷದ ನಾಯಕತ್ವ ಖಂಡಿತಾ ಸಚಿವ ಸ್ಥಾನ ನೀಡಲಿದೆ ಎಂಬ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ದೇಶಾದ್ಯಂತ ಬಿಜೆಪಿಯಿಂದ ಸ್ಪರ್ಧಿಸಿರುವ ಅಭ್ಯರ್ಥಿಗಳ ಎಲ್ಲ ವಿವರಗಳು ಮೋದಿ ಬಳಿ ಇದ್ದು, ಅವುಗಳನ್ನು ಪರಿಶೀಲಿಸಿದ ನಂತರ ಯಾರಿಗೆ ಯಾವ ಸಚಿವ ಸ್ಥಾನ ನೀಡಬೇಕೆಂಬುದರ ಕುರಿತು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸ್ಥಳೀಯ ಮುಖಂಡರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಪಕ್ಷ ಇನ್ನಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಅಣ್ಣಾಮಲೈ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಬೇಕು ಎಂದು ಕಾರ್ಯಕರ್ತರು ಮತ್ತು ಅಭಿಮಾನಿಗಳ ಒತ್ತಾಯ ಹೆಚ್ಚಾಗಿದೆ ಎನ್ನಲಾಗಿದೆ.

Click 👇

https://newsnotout.com/2024/06/narendra-modi-oath-taking-invited-to-pejawar-shri
https://newsnotout.com/2024/06/the-python-issue-in-indonesia-kannada-news-women

Related posts

58 ಲಕ್ಷ ರೂ. ಸಂಬಳವಿದ್ದರೂ ಗರ್ಲ್‌ಫ್ರೆಂಡ್‌ ಇಲ್ಲವೆಂದು ಬೇಸರ..! ಬೆಂಗಳೂರಿಗನ ಟ್ವೀಟ್ ಎಲ್ಲೆಡೆ ವೈರಲ್!

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ| ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸುಳ್ಯ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ

FREE BUS: ತೃತೀಯ ಲಿಂಗಿಗೆ ಟಿಕೆಟ್ ನೀಡುವಲ್ಲಿ ಗೊಂದಲಕ್ಕೀಡಾದ ಕಂಡಕ್ಟರ್! ಆಧಾರ್ ನಲ್ಲಿ ಗಂಡು, ಹೆಸರು ಲಕ್ಷ್ಮೀ! ಕಂಡಕ್ಟರ್ ಮಾಡಿದ್ದೇನು?