ಕೆವಿಜಿ ಕ್ಯಾಂಪಸ್‌

ಸುಳ್ಯ: ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಾರ್ಷಿಕೋತ್ಸವ

138

ನ್ಯೂಸ್ ನಾಟೌಟ್: ವಿದ್ಯಾರ್ಥಿಗಳು ಶಿಕ್ಷಣ, ಸಾಂಸ್ಕೃತಿಕ ಚಟುವಟಿಕೆಯಿಂದ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ವಿದ್ಯಾರ್ಥಿ ಜೀವನಕ್ಕೆ ಮೆರುಗು ಬರುತ್ತದೆ. ಈ ನಿಟ್ಟಿನಲ್ಲಿ ಕಾಲೇಜು ವಾರ್ಷಿಕೋತ್ಸವಗಳು ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆಯನ್ನು ಹೊರತರಲು ಪೂರಕವಾಗುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷ ಡಾ| ಕೆ.ವಿ ಚಿದಾನಂದ ಅಭಿಪ್ರಾಯಪಟ್ಟರು.

ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ (ಡಿ.10 ) ಸಂಭ್ರಮದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿ ಸೈಂಟ್ ಜೋಸೆಫ್ ಎಜುಕೇಶನಲ್ ಇನ್‌ಸ್ಟಿಟ್ಯೂಷನ್ ಸುಳ್ಯ ಇದರ ಫಾದರ್ ವಿಕ್ಟರ್ ಡಿಸೋಜ ಮಾತನಾಡಿ” ಸ್ವಾರ್ಥ, ಅಹಂ ಹಾಗೂ ಅಹಂಕಾರವನ್ನು ತ್ಯಜಿಸಿದಾಗ ಮಾತ್ರ ಉತ್ತಮ ವ್ಯಕ್ತಿಗಳಾಗಲು ಸಾಧ್ಯ ಎಂದರು.

ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಮಾತನಾಡಿ, ವಿದ್ಯೆ ಮನುಷ್ಯನಿಗೆ ಗೌರವವನ್ನು ತಂದುಕೊಡುತ್ತದೆ. ನಿಮ್ಮ ಶೈಕ್ಷಣಿಕ ಅವಧಿಯಲ್ಲಿ ವಿದ್ಯೆಯ ಕಡೆಗೆ ಹೆಚ್ಚಿನ ಗಮನಕೊಡಿ ಉತ್ತಮ ಜೀವನ ರೂಪಿಸಿಕೊಳ್ಳಿ ಎಂದರು. ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಡಾ| ರುದ್ರ ಕುಮಾರ್ ಎಂ ಎಂ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ. ರೈ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ ಬಿ ದತ್ತಿ ನಿಧಿ ಬಹುಮಾನ ವಾಚಿಸಿದರು. ಉಪನ್ಯಾಸಕರಾದ ಗೀತಾ ಎನ್ ಕಲಿಕೆಯ ಬಹುಮಾನ ವಾಚಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ರಿಯಾ ಕೆ ಜೆ ಮುಖ್ಯ ಅತಿಥಿಗಳ ಪರಿಚಯ ಮಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿನಯ್ ನಿಡ್ಯಮಲೆ ಬಹುಮಾನಿತರ ಪಟ್ಟಿ ವಾಚಿಸಿದರು.

ಕಾರ್ಯಕ್ರಮದಲ್ಲಿ ಆಜ್ಞ ಮತ್ತು ಬಳಗದವರು ಪ್ರಾರ್ಥಿಸಿದರು. ವಿದ್ಯಾರ್ಥಿ ನಾಯಕಿ ಗಾಯತ್ರಿ ಸ್ವಾಗತಿಸಿದರು. ಅಮೋಘ ಎಂ.ಎಸ್ ವಂದಿಸಿದರು. ಕೃತಸ್ವರ ದೀಪ್ತ ಕೆ, ಮೋಕ್ಷ್ ಡಿ.ಎಲ್. ಎಂ.ಆರ್ ಸುಮಂತ್ ಶ್ರೇಯ ಎಂ.ಜಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬೋಧಕ- ಬೋಧಕೇತರ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

See also  ಸುಳ್ಯ: ಎನ್ನೆಂಸಿಯ ಯುವ ರೆಡ್‌ಕ್ರಾಸ್ ಘಟಕದಿಂದ ರಸ್ತೆ ಸುರಕ್ಷತಾ ಮತ್ತು ಮಾದಕ ವ್ಯಸನ ಜಾಗೃತಿ ಮಾಹಿತಿ ಕಾರ್ಯಾಗಾರ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget