ವೈರಲ್ ನ್ಯೂಸ್ಸುಳ್ಯ

ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ, ವಿದ್ಯಾರ್ಥಿ ನಾಯಕರಿಗೆ ಶುಭ ಹಾರೈಸಿದ AOLE ಅಧ್ಯಕ್ಷ ಡಾ ಕೆ.ವಿ ಚಿದಾನಂದ

166

ನ್ಯೂಸ್ ನಾಟೌಟ್: ಕೆವಿಜಿ ಕಾನೂನು ಮಹಾವಿದ್ಯಾಲಯದಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ನ.11ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ(ರಿ.) ಡಾ ಕೆ.ವಿ.ಚಿದಾನಂದ ವಹಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಯಾಗಿ ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ಎನ್ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ವಿದ್ಯಾಭ್ಯಾಸದ ಮಹತ್ವ ಮತ್ತು ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಪ್ರೊ. ಟೀನಾ ಎಚ್.ಎಸ್ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ವೇದಿಕೆಯಲ್ಲಿ ಕಾಲೇಜಿನ ಆಡಳಿತಾಧಿಕಾರಿ ಪ್ರೊ. ದಾಮೋದರ ಗೌಡ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಉದಯಕೃಷ್ಣ ಬಿ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಟೀನಾ ಎಚ್.ಎಸ್, ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೀವಿತ್ ಕೆ.ಪಿ, ಉಪಾಧ್ಯಕ್ಷ ಮುಶ್ರಫ್, ಕಾರ್ಯದರ್ಶಿ ಮಾನಸ ಮತ್ತು ಜೊತೆ ಕಾರ್ಯದರ್ಶಿ ಸುಶ್ಮಾಂಜಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಮ್ಯ ಕೆ ಪ್ರಾರ್ಥಿಸಿದರು. ಡಾ. ಉದಯಕೃಷ್ಣ.ಬಿ ಸ್ವಾಗತಿಸಿ, ವಿದ್ಯಾರ್ಥಿ ಸಂಘದ ನಾಯಕ ಜೀವಿತ್ ಕೆ.ಪಿ ವಂದಿಸಿದರು. ಉಪನ್ಯಾಸಕಿ ಶ್ರೀಮತಿ ಅರ್ಚನಾ ಆರ್.ರೈ ಕಾರ್ಯಕ್ರಮ ನಿರೂಪಿಸಿದರು.

See also  ದೇವರಕೊಲ್ಲಿ: ಟಿಟಿ ಹಾಗೂ ಲಾರಿ ನಡುವೆ ಭೀಕರ ಅಪಘಾತ, ಟಿಟಿ ಪುಡಿಪುಡಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget