ನ್ಯೂಸ್ ನಾಟೌಟ್: ಸುಳ್ಯ ಸಮೀಪದ ಅರಂತೋಡು ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೈಕ್ ಸವಾರ ಹರೀಶ್ ಚಿಕಿತ್ಸೆಗೆ ಸ್ಪಂದಿಸದೆ ಇದೀಗ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಹರೀಶ್ ಅವರು ಮಂಗಳೂರಿನ ಕಂಕನಾಡಿ ಪೊಲೀಸ್ ಸ್ಟೇಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಕೆಆರ್ ನಗರ ತಾಲೂಕು ಮೈಸೂರು ಜಿಲ್ಲೆಯ ಗಾಯನ ಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಬುಧವಾರ ಅರಂತೋಡು ಸಮೀಪ ರಸ್ತೆ ಅಪಘಾತವಾಗಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.