ನ್ಯೂಸ್ ನಾಟೌಟ್: ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2025-2 6ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಕೆ.ಅರ್.ಆನಂದ ಕಲ್ಲುಗದ್ದೆ ಅವರ ದತ್ತಿನಿಧಿ ಯಿಂದ ನೋಟ್ ಪುಸ್ತಕಗಳ ವಿತರಣೆ ಮತ್ತು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಾಳೆ (ಜೂ.21) ರಂದು ನಡೆಯಲಿದೆ.
ಇದರ ಜೊತೆಗೆ ಮಕ್ಕಳ ಸುರಕ್ಷತಾ ಕಾರ್ಯಕ್ರಮ, ಆರೋಗ್ಯ ಮಾಹಿತಿ ಹಾಗೂ ಇಲಾಖಾ ಕಾರ್ಯಗಾರ ಬೆಳಿಗ್ಗೆ 10 ಗಂಟೆಗೆ ಶಾಲೆಯ ದಿ. ಯು.ಡಿ.ಶೇಖರ ಸಭಾ ವೇದಿಕೆಯಲ್ಲಿ ನಡೆಯಲಿದೆ.
ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಅಧ್ಯಕ್ಷತೆ ವಹಿಸಲಿದ್ದಾರೆ . ಸುಳ್ಯ ಠಾಣೆಯ ಪೊಲಿಸ್ ಉಪನಿರೀಕ್ಷಕ ಸಂತೋಷ್ ಬಿ. ಪಿ. ಕಾರ್ಯಗಾರದ ಉದ್ಘಾಟನೆ ಮಾಡಲಿದ್ದಾರೆ.
ಚಿನ್ನಮ್ಮ ಕಲ್ಲುಗದ್ದೆ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಿಸಲಿದ್ದು, ಈ ವೇಳೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸುರೇಶ್ ವಾಗ್ಲೆ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಮಕ್ಕಳ ಸುರಕ್ಷತೆ ಹಾಗೂ.ಕಾನೂನು ಅರಿವು ಬಗ್ಗೆ ಸುಳ್ಯ ಠಾಣಾ ಉಪ ನಿರೀಕ್ಷಕ ಸಂತೋಷ್.ಬಿ.ಪಿ.ಮಾಹಿತಿ ನೀಡಲಿದ್ದಾರೆ. ಸುಳ್ಯ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಪ್ರಮೀಳಾ ಬಿ. ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಸುಳ್ಯ ಬಿ.ಆರ್.ಪಿ.ಸುಬ್ರಮಣ್ಯ ಕೆ.ಎನ್ ಶಿಕ್ಷಣ ಇಲಾಖೆಯ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದು, ಈ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ, ಎಸ್.ಡಿ.ಎಂ.ಸಿ.ಅಧ್ಯಕ್ಷ ಸುರೇಶ್, ಯು.ಕೆ.ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.