ನ್ಯೂಸ್ ನಾಟೌಟ್: ಸುಳ್ಯ ತಾಲೂಕಿನ ಅರಂತೋಡು ಅಡ್ಕಂಬಳೆ ಎಂಬಲ್ಲಿ ತೆಂಗಿನಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ (ಮೇ 11) ಇದೀಗ ಸಂಭವಿಸಿದೆ.
ಮೃತಪಟ್ಟವರನ್ನು ವಾಸು ಎಂದು ಗುರುತಿಸಲಾಗಿದೆ. ಅವರಿಗೆ ಸುಮಾರು 45 ವಯಸ್ಸಾಗಿತ್ತು ಎಂದು ತಿಳಿದುಬಂದಿದೆ. ತೆಂಗಿನಮರದಿಂದ ಬಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣ ಅವರನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.