ಅಡಿಕೆ ಬೆಳೆಗಾರರ ಆರ್ಥಿಕ ಪುನಶ್ಚೇತನಕ್ಕೆ ರೂ.25 ಕೋಟಿ ನೀಡಲು ಒತ್ತಾಯ

4

ಸುಳ್ಯ: ಬಿ.ಎಸ್. ಯಡಿಯೂರಪ್ಪರವರು ಮುಖ್ಯಮಂತ್ರಿಯಾಗಿದ್ದಾಗ ಅಡಿಕೆ ಹಳದಿ ಎಲೆ ರೋಗ ಸಂಶೋಧನೆಗೆಂದು ಬಜೆಟ್ ನಲ್ಲಿ ಘೋಷಿಸಿರುವ ರೂ.25 ಕೋಟಿ ಮೊತ್ತವನ್ನು ರೈತರ ಆರ್ಥಿಕ ಪುನಶ್ಚೇತನಕ್ಕೆ ನೀಡಬೇಕೆಂದು ಸುಳ್ಯದ ಅಡಿಕೆ ಬೆಳೆ ಹಿತರಕ್ಷಣಾ ವೇದಿಕೆ ಆಗ್ರಹಿಸಿದೆ.

ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೇದಿಕೆಯ ಸಂಚಾಲಕ ಶಿವಾನಂದ ಕುಕ್ಕುಂಬಳ, ಅಡಿಕೆ ಕೃಷಿಗೆ ಹಳದಿ ಎಲೆ ರೋಗ ಬಂದುದರಿಂದ ಈ ಭಾಗದ ರೈತರು ಸಂಕಷ್ಟಕ್ಕೊಳಗಾಗಿ ರೈತರ ಮೇಲೆ ದೊಡ್ಡ ಹೊಡೆತ ಬಿದ್ದಿದೆ. ಈ ಬಗ್ಗೆ ಜನಜಾಗೃತಿಗಾಗಿ ಕಾರ್ಯಕ್ರಮಗಳು ನಡೆದಿದೆ. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ನಲ್ಲಿ ಅಡಿಕೆ ಹಳದಿ ಎಲೆ ರೋಗಕ್ಕೆ 25 ಕೋಟಿ ರೂ ಮೀಸಲಿಟ್ಟಿದ್ದರು. ಘೋಷಣೆಯಗಿರುವ ಮೊತ್ತ ಸಂತ್ರಸ್ತ ರೈತರ ಆರ್ಥಿಕ ಪುನಶ್ಚೇತನಕ್ಕೆ ದೊರೆಯಬಹುದೆಂಬ ನಿರೀಕ್ಷೆಯಿಂದ ನಾವೆಲ್ಲ ಇದ್ದೆವು. ಬಳಿಕ ಅದು ಸಂಶೋಧನೆಗೆ ಮೀಸಲಿಟ್ಟದ್ದೆಂದು ವರದಿಯಾದಾಗ ಅದು ರೈತರ ಭಾವನೆಗೆ ಪೂರಕವಾಗಿಲ್ಲ ಎಂದು ಗೊತ್ತಾಗಿ ಬೇಸರವಾಗಿತ್ತು. ಆರಂಭದಿಂದಲೇ ನಮ್ಮ ಪ್ರಮುಖ ಬೇಡಿಕೆ ಇದ್ದುದು ಅಡಿಕೆ ಹಳದಿ ಎಲೆ ರೋಗದಿಂದ ಸಂತ್ರಸ್ತರಾಗಿರುವ ರೈತರಿಗೆ ಆರ್ಥಿಕ ಪುನಶ್ಚೇತನ ಮಾಡಬೇಕೆನ್ನುವುದು. ಆದ್ದರಿಂದ ಈಗ ಸಂಶೋಧನೆಗೆಂದು ಇಟ್ಟಿರುವ ಹಣವನ್ನು ಆರ್ಥಿಕ ಪುನಶ್ಚೇತನಕ್ಕೆ ನೀಡಬೇಕು ಎಂದು ನಾವು ಸರಕಾರ ಮತ್ತು ಅಧಿಕಾರಿಗಳನ್ನು ಒತ್ತಾಯಿಸುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಅನೂಪ್ ಬಿಳಿಮಲೆ, ಸುದರ್ಶನ್ ಪಾತಿಕಲ್ಲು, ಮನುದೇವ್ ಪರಮಲೆ ಉಪಸ್ಥಿತರಿದ್ದರು.

Related Articles

Latestಕರಾವಳಿಕ್ರೈಂಮಂಗಳೂರು

ಮಂಗಳೂರು: ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಐಟಿ ದಾಳಿ..!

ನ್ಯೂಸ್‌ ನಾಟೌಟ್: ಮಂಗಳೂರು ನಗರದಲ್ಲಿ ನಾಲ್ಕು ಪಾನ್ ಮಸಾಲಾ, ಸುಪಾರಿ ಟ್ರೇಡಿಂಗ್ ಕಂಪೆನಿಗಳ ಮೇಲೆ ಆದಾಯ...

ಉಡುಪಿಕರಾವಳಿಕ್ರೈಂ

ಉಡುಪಿ: ಮುಸುಕುಧಾರಿಗಳಿಂದ ಕೆನರಾ ಬ್ಯಾಂಕಿನ ಎಟಿಎಂಗೆ ನುಗ್ಗಿ ಕಳವಿಗೆ ಯತ್ನ..! ಸೈರನ್ ಮೊಳಗಿದ ಕಾರಣ ಪರಾರಿ..!

ನ್ಯೂಸ್‌ ನಾಟೌಟ್: ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರಕ್ಕೆ ನುಗ್ಗಿದ ಮುಸುಕುಧಾರಿ ಕಳ್ಳರು ಕಳವಿಗೆ ಯತ್ನಿಸಿರುವ ಘಟನೆ...

ಕರಾವಳಿ

ಸದಾ ಮುಸ್ಲಿಮರೇ ಟಾರ್ಗೆಟ್,ಧರ್ಮಕ್ಕಾಗಿ ಬದುಕಿರುವ ಮುಸ್ಲಿಮರು ಇನ್ನೂ ಇದ್ದಾರೆ:ಉದಯಗಿರಿ ಕಲ್ಲು ತೂರಾಟಕ್ಕೂ ಮುನ್ನ ಮೌಲ್ವಿ ಪ್ರಚೋದನಕಾರಿ ಭಾಷಣ

ನ್ಯೂಸ್‌ ನಾಟೌಟ್‌ :ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ಹಾಕಿದ ಸೋಷಿಯಲ್‌ ಮೀಡಿಯಾ ಪೋಸ್ಟ್...

@2025 – News Not Out. All Rights Reserved. Designed and Developed by

Whirl Designs Logo