ರಾಜಕೀಯವೈರಲ್ ನ್ಯೂಸ್

ಅರ್ಜುನ ಆನೆಯ ನೆನಪಿಗಾಗಿ ಸ್ಮಾರಕ ನಿರ್ಮಾಣವಾಗುತ್ತಾ..? ಅರಣ್ಯ ಸಚಿವ ಈ ಬಗ್ಗೆ ಹೇಳಿದ್ದೇನು?

ನ್ಯೂಸ್ ನಾಟೌಟ್: ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಸಚಿವ, ನಾಡಿನ ಜನರ ಪ್ರೀತಿಗೆ ಪಾತ್ರನಾಗಿದ್ದ ಅರ್ಜನನ ಅಂತ್ಯ ಅತ್ಯಂತ ದುಃಖದಾಯಕ. ಅರ್ಜನ ಮತ್ತು ನಾಡಿನ ಜನತೆಯ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಈ ಆನೆ ಸಾವು ನಾಡಿನಾದ್ಯಂತ ಇರುವ ಪ್ರಾಣಿ ಪ್ರಿಯರಿಗೆ ಮತ್ತು ಸಾರ್ವಜನಿಕರಿಗೆ ನೋವು ತಂದಿದೆ ಎಂದಿದ್ದಾರೆ.

ಆನೆ ಸೇರಿದಂತೆ ವನ್ಯಮೃಗಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗುತ್ತಿದ್ದು, ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ವನ್ಯಮೃಗಗಳೂ ಸಾವಿಗೀಡಾಗುತ್ತಿರುವುದು ಆಂತಕದ ವಿಷಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಪಡೆ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲು ಕ್ರಮ ಕೈಗೊಳ್ಳುಲು ಸೂಚಿಸಲಾಗಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಹಲವು ಹುಲಿ, ಆನೆ ಕಾರ್ಯಾಚರಣೆಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಿನ್ನೆ(ಡಿ.೫) ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಅರ್ಜುನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದ, ಕೊಠಡಿ ಸಂಖ್ಯೆ 318ರಲ್ಲಿ ನಡೆದ ಸಭೆಯಲ್ಲಿ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರುಗಳಾದ ಕೆ.ಜೆ. ಜಾರ್ಜ್, ಬೋಸರಾಜ್ ಮತ್ತು ಕೆ.ಎನ್. ರಾಜಣ್ಣ ಹಾಗೂ ಮೂರೂ ಜಿಲ್ಲೆಗಳ ಶಾಸಕರ ಉಪಸ್ಥಿತಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗಿರುವ 9 ಜಿಲ್ಲೆಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ವಾರದಲ್ಲಿ ಕನಿಷ್ಠ 2 ದಿನ ನಿಯೋಜಿತ ಜಿಲ್ಲೆಯಲ್ಲೇ ಉಳಿದು ಪರಿಸ್ಥಿತಿಯನ್ನು ನಿಭಾಯಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

https://newsnotout.com/2023/12/police-station-and-intercaste-marriage-issue-bajarangadala/

Related posts

ವಿವಾಹಿತ ಮಹಿಳೆಗಾಗಿ ಸಹೋದರರ ಕಿತ್ತಾಟ..! ಮುಂದೇನಾಯ್ತು..? ಇಲ್ಲಿದೆ ಸಂಪೂರ್ಣ ವಿವರ

ಮೋದಿ ಪರ ಘೋಷಣೆ ಕೂಗಿದವರ ಶೇಕ್ ಹ್ಯಾಂಡ್‌ ಮಾಡಿದ ರಾಹುಲ್..!’ಪ್ರೀತಿಯಲ್ಲಿ ದೊಡ್ಡ ಶಕ್ತಿ ಇದೆ’ ಎಂದ ಕಾಂಗ್ರೆಸ್‌..!ವಿಡಿಯೋ ವೈರಲ್

Challenging Star Darshan arrested: ದರ್ಶನ್ ಅರೆಸ್ಟ್ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದೇನು..? ಇಲ್ಲಿದೆ ಸಂಪೂರ್ಣ ಮಾಹಿತಿ