ಕರಾವಳಿಪುತ್ತೂರುರಾಜಕೀಯಸುಳ್ಯ

ಪುತ್ತೂರು:ನಾಮಪತ್ರ ಸಲ್ಲಿಸಲಿರುವ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ,ಖ್ಯಾತ ನಟಿ ಶೃತಿ ಪುತ್ತೂರಿಗೆ ಆಗಮನ

324

ನ್ಯೂಸ್ ನಾಟೌಟ್: ಪುತ್ತೂರಿನಲ್ಲಿಂದು ಸಂಭ್ರಮ ಮುಗಿಲು ಮುಟ್ಟಿದೆ.ಹೌದು, ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಇಂದು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು,ಮುಖಂಡರು,ಅಭಿಮಾನಿಗಳು ಪುತ್ತೂರು ಮಹಾಲಿಂಗೇಶ್ವರ ದೇಗುಲದ ದೇವರ ಗದ್ದೆಯಲ್ಲಿ ಒಟ್ಟಾಗಿದ್ದಾರೆ.ಇದಕ್ಕು ಮುನ್ನ ಆಶಾ ತಿಮ್ಮಪ್ಪ ಗೌಡ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.

ಅದ್ದೂರಿ ಮೆರವಣಿಗೆಗೆ ಹಾಗೂ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ದ.ಕ ಸಂಸದ ನಳೀನ್ ಕುಮಾರ್ ಕಟೀಲ್ ಚಾಲನೆ ನೀಡಿದರು.ಪುತ್ತೂರು ಶಾಸಕ ಸಂಜೀವ ಮಠಂದೂರು,ಸಂಸದ ತೇಜಸ್ವಿ ಸೂರ್ಯ, ಸುಳ್ಯ ಬಿಜೆಪಿ ಆಭ್ಯರ್ಥಿ ಭಾಗೀರಥಿ ಮುರುಳ್ಯ ,ವಿಟ್ಲದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ,ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮತ್ತಿತರರು ಭಾಗಿಯಾಗಿದ್ದಾರೆ.

ಇಂದು ಆಶಾ ತಿಮ್ಮಪ್ಪ ಅವರು ನಾಮಪತ್ರ ಸಲ್ಲಿಸುತ್ತಿದ್ದು ಕನ್ನಡ ಚಿತ್ರರಂಗ ಕಂಡ ಖ್ಯಾತ ನಟಿ ಹಾಗೂ ಬಿಜೆಪಿ ಪ್ರಮುಖರು ಆಗಿರುವ ಶೃತಿ ಅವರು ಇದೀಗ ಪುತ್ತೂರಿಗೆ ಆಗಮಿಸಿದ್ದು ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿಸಿ ಸಂಭ್ರಮ ತಂದರು.ನಗರದೆಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.ಎಲ್ಲೆಡೆ ಬಿಜೆಪಿ ಧ್ವಜ ಹಾರಾಡುತ್ತಿದ್ದು, ಇಡೀ ಪುತ್ತೂರು ನಗರ ಕೇಸರಿಮಯವಾಗಿದೆ.ಬಿಜೆಪಿಗೆ ಜೈಕಾರ ಮಾರ್ಧನಿಸುತ್ತಿದೆ.

See also  ಕಾಸರಗೋಡು: ಮೀನುಗಾರಿಕಾ ಬೋಟ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು..! ತನಿಖೆ ನಡೆಸುತ್ತಿರುವ ಪೊಲೀಸರು
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget