ಕರಾವಳಿಕೊಡಗುನಮ್ಮ ತುಳುವೇರ್ಪುತ್ತೂರುರಾಜಕೀಯಸುಳ್ಯ

ಸಾವರ್ಕರ್ ಮತ್ತು ಟಿಪ್ಪು ಸಿದ್ಧಾಂತಗಳ ಚುನಾವಣೆ: ನಳಿನ್‌ ಕುಮಾರ್‌

296

ನ್ಯೂಸ್‌ನಾಟೌಟ್‌: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಅವರು ಕಾಂಗ್ರೆಸ್‌ ವಿರುದ್ಧಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಾರಿಯ ವಿಧಾನಸಭೆ ಚುನಾವಣೆ ಸಾವರ್ಕರ್‌ ಮತ್ತು ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದ್ದು, ದೇಶ ಭಕ್ತ ವೀರ ಸಾವರ್ಕರ್‌ ಅವರಿಗೆ ಜನಬೆಂಬಲ ಸಿಗುತ್ತಾ ಅಥವಾ ಈ ನಾಡನ್ನು ಕೊಳ್ಳೆ ಹೊಡೆದ ಮತಾಂಧ ಟಿಪ್ಪು ಬೇಕಾ ಎಂಬುವುದನ್ನು ಮತದಾರರು ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಮಂಗಳವಾರ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ನಡೆದ ವಿಧಾನಸಭಾ ಕ್ಷೇತ್ರದ ಪೇಜ್ ಪ್ರಮುಖರ ಸಮಾವೇಶದಲ್ಲಿಮಾತನಾಡಿದರು.

ಜೆಡಿಎಸ್‌ ಮುಖಂಡ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಈಗ ಬ್ರಾಹ್ಮಣ ಸಮುದಾಯವನ್ನು ಅವಹೇಳಕಾರಿಯಾಗಿ ಟೀಕಿಸಿ ಅ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಎಚ್‌ಡಿಕೆ ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೆ ಜಾತಿ ಹೇಳಿಕೆ ನೀಡಿ ಸಮಾಜದಲ್ಲಿ ಒಡಕು ಮೂಡಿಸುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

See also  ತರಕಾರಿ ಖರೀದಿಸುವ ಸೋಗಿನಲ್ಲಿ ಬಂದು ಸರ ಕಳ್ಳತನ,ಮೂರುವರೆ ಪವನ್ ಚಿನ್ನದ ಸರ ಎಗರಿಸಿ ಪರಾರಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget