ಕ್ರೈಂರಾಜ್ಯವೈರಲ್ ನ್ಯೂಸ್

ಎಟಿಎಂಗೆ ತುಂಬಿಸಲು ಬಂದವ ತನ್ನ ಬ್ಯಾಗ್‌ ನಲ್ಲೇ ಹಣ ತುಂಬಿಕೊಂಡು ಪರಾರಿ..! ಎಟಿಎಂಗೆ ಹಣ ತುಂಬುವ ಏಜೆನ್ಸಿಯಾಗಿ ದುಡಿಯುತ್ತಿದ್ದ ಆತನಿಗೆ ಆಕೆಯ ಕುಮ್ಮಕ್ಕು..!

178

ನ್ಯೂಸ್ ನಾಟೌಟ್: ಎಟಿಎಂಗೆ ಹಣ ತುಂಬದೇ ತೆಗೆದುಕೊಂಡ ಹೋದ ಆರೋಪದಲ್ಲಿ ಮೈಸೂರು ಜಿಲ್ಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬವರ ವಿರುದ್ಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಎಲ್ ಎಂಟರ್‌ಪ್ರೈಸಸ್‌ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಟಿಎಲ್ ಎಂಟರ್‌ ಪ್ರೈಸಸ್, ಎಟಿಎಂಗೆ ಹಣ ತುಂಬುವ ಏಜೆನ್ಸಿ ಪಡೆದಿತ್ತು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ ತುಂಬುತ್ತಿದ್ದ. ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡಿದ್ದ. ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಕಂಡುಬಂದಿದೆ.

ಕ್ಯಾಶ್ ಲೋಡಿಂಗ್ ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ, ಆಕ್ಷಯ್ ಎಟಿಎಂಗೆ ಹಣ ಹಾಕದೆ ಬ್ಯಾಗ್‌ ನಲ್ಲಿ ತುಂಬಿಕೊಂಡು ಹೋದ ದೃಶ್ಯ ಸೆರೆಯಾಗಿದೆ. ಗದ್ದಿಗೆ ಗ್ರಾಮದ ಎಟಿಎಂನಲ್ಲಿ 5.80 ಲಕ್ಷ ಹಣ ಲೋಡ್ ಮಾಡಿಲ್ಲ ಎನ್ನಲಾಗಿದೆ.

ಈ ಕೃತ್ಯಕ್ಕೆ ಆತನ ಪರಿಚಯದ ತೇಜಸ್ವಿನಿ ಎಂಬಾಕೆಯ ಕುಮ್ಮಕ್ಕು ಇತ್ತು ಎಂಬ ಆರೋಪ ಕೇಳಿಬಂದಿದೆ. ಇಬ್ಬರೂ ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಹಿನ್ನೆಲೆ ಇಬ್ಬರ ವಿರುದ್ದ ಎಫ್‌ಐಆರ್ ದಾಖಲಾಗಿದೆ.

See also  ಕಾಲಿನ ಮೂಲಕ ಮತದಾನ ಮಾಡಿದ ಯುವಕ..! ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget