ನ್ಯೂಸ್ ನಾಟೌಟ್: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಫೆ 13 ರಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿ ಗಳಿಗೆ ಮಾಹಿತಿ ಕಾರ್ಯಾಗಾರ ವನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ ಡಾ. ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿಡಾ. ಹರ್ಷಿತ ಎಂ, ಶೈಕ್ಷಣಿಕ ಮುಖ್ಯಸ್ಥೆ ಡಾ. ಕವಿತಾ ಬಿ. ಎಂ. ಉಪಸ್ಥಿತರಿದ್ದರು.