ಕೆವಿಜಿ ಕ್ಯಾಂಪಸ್‌

ಸುಳ್ಯ: ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ನೇತೃತ್ವದಲ್ಲಿ ಆಯೋಜನೆ

140

ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ವತಿಯಿಂದ ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಶನಿವಾರ (ಜ 25) ಕಾಲೇಜಿನಲ್ಲಿ ಆಯೋಜಿಸಲಾಯಿತು. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿ-ಕ್ಷಯ ಯೋಜನೆಯ ಅಡಿಯಲ್ಲಿ ಆಯುಷ್ ಇಲಾಖೆ ದಕ್ಷಿಣ ಕನ್ನಡದ ಮಾರ್ಗಸೂಚಿ ಪ್ರಕಾರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಕ್ಷಯ ರೋಗದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಬೀದಿ ನಾಟಕ ಮಾನವ ಸರಪಳಿ ಜಾಥ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಲೀಲಾದರ್ ಡಿ.ವಿ., ಎನ್ಎಸ್ಎಸ್ ಯೋಜನಾಧಿಕಾರಿ ಡಾ. ಪ್ರಮೋದ ಪಿ.ಎ., ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

See also  ಸುಳ್ಯ: ನೆಹರು ಮೆಮೋರಿಯಲ್ ಕಾಲೇಜಿನಲ್ಲಿ ಏವಿಯೇಷನ್ ಕೋರ್ಸ್ ಉದ್ಘಾಟನೆ, ವಿವಿಧ ಉನ್ನತ ಅವಕಾಶಗಳಿಗೆ ಅತ್ಯುತ್ತಮ ವೇದಿಕೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget