ಕ್ರೈಂದೇಶ-ಪ್ರಪಂಚದೇಶ-ವಿದೇಶವೈರಲ್ ನ್ಯೂಸ್

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ..! ಮೆದುಳಿನಲ್ಲಿ ರಕ್ತಸ್ರಾವ..!

ನ್ಯೂಸ್‌ ನಾಟೌಟ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ಇಂದು(ಫೆ.12) ನಿಧನರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಸತ್ಯೇಂದ್ರ ದಾಸ್ ಪಾರ್ಶ್ವವಾಯುದಿಂದ ಬಳಲುತ್ತಿದ್ದರು. ಜತೆಗೆ, ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ಮತ್ತೆ ಕಟ್ಟಿದ್ದ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.

ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕೆಲವು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದರು. ಆಚಾರ್ಯ ಸತ್ಯೇಂದ್ರ ದಾಸ್ ಅವರ ನಿಧನವನ್ನು ರಾಮ ಮಂದಿರ ಟ್ರಸ್ಟ್ ದೃಢಪಡಿಸಿದೆ. ಅವರು 1993 ರಿಂದ ರಾಮನನ್ನು ಪೂಜಿಸುತ್ತಿದ್ದರು.

Related posts

ನಕ್ಸಲರ ಎನ್‌ ಕೌಂಟರ್ ವೇಳೆ ಪೊಲೀಸ್ ಸಿಬ್ಬಂದಿ ಸಾವು..! 4 ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು..!

ಜೈಲಿನಲ್ಲಿ ದರ್ಶನ್ ಗೆ ಬಿಂದಾಸ್ ಲೈಫ್, ರೌಡಿ ವಿಲ್ಸನ್ ಗಾರ್ಡನ್ ನಾಗನ ಜೊತೆ ಹರಟೆ..! ಕೈಯಲ್ಲಿ ಸಿಗರೇಟ್, ಕಾಫಿ ಮಗ್..!

ಅನ್ಯ ಕೋಮಿನ ವ್ಯಕ್ತಿಯಿಂದ ಮದುವೆಗೆ ಮುನ್ನವೇ 2 ಬಾರಿ ಗರ್ಭಿಣಿಯಾದ ಅಪ್ರಾಪ್ತೆ..! ಆಕೆಯ ಪೋಷಕರು ಮಗುವನ್ನು ಮಾರಾಟ ಮಾಡಿದ್ದಾರೆಂದು ದೂರು