ದೇಶ-ಪ್ರಪಂಚವೈರಲ್ ನ್ಯೂಸ್

ಅಯ್ಯಪ್ಪ ಮಾಲಾಧಾರಿಗಳಿಗೆ ಇನ್ಮುಂದೆ ಉಚಿತ ಸಾರಿಗೆ ವ್ಯವಸ್ಥೆ, ವಿಶ್ವ ಹಿಂದೂ ಪರಿಷತ್ ಮನವಿಗೆ ಸುಪ್ರೀಂ ಒಪ್ಪಿಗೆ

ನ್ಯೂಸ್‌ ನಾಟೌಟ್‌ : ಶಬರಿಮಲೆ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಸಾಗಿಸಲು ಉಚಿತ ವಾಹನಗಳ ಸಂಚಾರಕ್ಕೆ ಅನುಮತಿ ಕೋರಿ ವಿಎಚ್‌ಪಿ ಸಲ್ಲಿಸಿರುವ ಮನವಿಗೆ ಸುಪ್ರೀಂ ಕೋರ್ಟ್ ಕೇರಳ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದ್ದು, ಯೋಜನೆಗೆ ಒಪ್ಪಿಗೆ ನೀಡಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ)ಯ ಅರ್ಜಿಯನ್ನು ಕುರಿತು ಸುಪ್ರೀಂ ಕೋರ್ಟ್ ಗುರುವಾರ(ಜ.25) ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಗುರುವಾರ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಈ ವೇಳೆ ವಿಎಚ್‌ಪಿ ಪರ ವಾದ ಮಂಡಿಸಿದ ಹಿರಿಯ ವಕೀಲ ವಿ.ಚಿತಾಂಬರೇಶ್ ವಾದ ಮಂಡಿಸಿದರು. ಈ ವೇಳೆ ಯಾತ್ರಾರ್ಥಿಗಳಲ್ಲಿ ವೃದ್ಧರು, ಮಕ್ಕಳು ಸೇರಿದಂತೆ ಹಲವರು ದೂರ ಕ್ರಮಿಸಿ ದೇವಸ್ಥಾನಕ್ಕೆ ತೆರಳಬೇಕಿರುವುದರಿಂದ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲು ಹಿಂದೂ ಹಕ್ಕುಗಳ ಸಂಘಟನೆ ಸಿದ್ಧವಿದೆ ಎಂದು ಪೀಠದ ಮುಂದೆ ಪ್ರಸ್ತಾಪಿಸಿದರು.

ಈ ಹಿಂದೆ ಕೇರಳ ರಾಜ್ಯ ರಸ್ತೆ ಮಾರ್ಗದ ಬಸ್‌ಗಳು ಪಂಪಾ ಎಂಬ ಸ್ಥಳದಲ್ಲಿ ಲಭ್ಯವಿತ್ತು. ಅಲ್ಲಿಂದ ದೇವಾಲಯಕ್ಕೆ ಆರು ಕಿಲೋಮೀಟರ್ ಪ್ರಯಾಣ ಪ್ರಾರಂಭವಾಗುತ್ತದೆ. ಉತ್ತಮ ಸ್ಥಿತಿಯಲ್ಲಿಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳು ಯಾತ್ರಾರ್ಥಿಗಳಿಂದ ಹೆಚ್ಚಿನ ದರವನ್ನು ವಿಧಿಸುವುದರಿಂದ ಜನರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಶಬರಿಮಲೆಯಕ್ಕೆ ಲಕ್ಷ ಲಕ್ಷ ಭಕ್ತರು ಭೇಟಿ ನೀಡುತ್ತಾರೆ. ಅವರು ಕೆಎಸ್‌ಆರ್‌ಟಿಸಿ ಬಸ್‌ಗಳಿಗಾಗಿ ಸರದಿಯಲ್ಲಿ 28-30 ಗಂಟೆಗಳಿಗೂ ಹೆಚ್ಚು ಕಾಲ ಕಾಯಬೇಕಾಗಿದೆ. ಅದು ಉತ್ತಮ ಸ್ಥಿತಿಯಲ್ಲ ಎಂದು ಅವರು ಹೇಳಿದರು.

ಜೊತೆಗೆ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪಿಕ್ ಆ್ಯಂಡ್ ಡ್ರಾಪ್ ಸೌಲಭ್ಯ ಮಾತ್ರ ಇರಬೇಕು ಹಾಗೂ ದಾರಿಯಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಬಾರದು ಎಂದು ಹಿರಿಯ ವಕೀಲರಿಗೆ ಪೀಠ ಹೇಳಿದೆ ಎನ್ನಲಾಗಿದೆ.
ಅಯ್ಯಪ್ಪ ದೇಗುಲವನ್ನು ನಿರ್ವಹಿಸುವ ತಿರುವಾಂಕೂರು ದೇವಸ್ವಂ ಬೋರ್ಡ್ (ಟಿಡಿಬಿ) ಕಳೆದ ಡಿಸೆಂಬರ್ 25 ರವರೆಗೆ ಕಳೆದ 39 ದಿನಗಳಲ್ಲಿ ದೇವಸ್ಥಾನಕ್ಕೆ 204.30 ಕೋಟಿ ಆದಾಯ ಬಂದಿದೆ ಎಂದು ತಿಳಿಸಿದೆ.

Related posts

ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದಕ್ಕೆ ಪಾಕ್‌ ಪ್ರಧಾನಿ ಅಭಿನಂದನೆ!? ಏನಿದು ಟ್ವೀಟ್..?

ಟಿಕೆಟ್‌ ದರ ಏರಿಸದಿದ್ದರೆ KSRTC ಸಂಸ್ಥೆ ಉಳಿಯಲ್ಲ ಎಂದ ನಿಗಮದ ಅಧ್ಯಕ್ಷ..! ದರ ಹೆಚ್ಚಳ ಪುರುಷರಿಗೆ ಮಾತ್ರವಾ..? ಶಾಸಕ ಹೇಳಿದ್ದೇನು..?

ನೇಣು ಬಿಗಿದುಕೊಳ್ಳುವಂತೆ ಪತ್ನಿಗೆ ಹೆದರಿಸಲು ಹೋಗಿ ಪ್ರಾಣ ಕಳೆದುಕೊಂಡ ಪತಿ..! ಏನಿದು ವಿಡಿಯೋ ಕಾಲ್ ಪ್ರಕರಣ..?